Advertisement

ಮೂರು ಸಾವಿರ ಭೂ ಮಾಪಕರ ನೇಮಕ: ಸಚಿವ ಆರ್‌.ಅಶೋಕ್‌

10:17 PM Mar 21, 2022 | Team Udayavani |

ವಿಧಾನಸಭೆ: ರಾಜ್ಯದಲ್ಲಿ ಭೂ ಸರ್ವೆ ಗಾಗಿ ಸಲ್ಲಿಸಿರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದ್ದು, ಮೂರು ಸಾವಿರ ಭೂಮಾಪಕರ ನೇಮಕ ಪ್ರಕ್ರಿಯೆ ಶುರುವಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದರು.

Advertisement

ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಡಾ.ಯತೀಂದ್ರ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮೂರು ಸಾವಿರ ಭೂ ಮಾಪಕರ ನೇಮಕದ ನಂತರ ಹಲವು ವರ್ಷ‌ಗಳಿಂದ ಬಾಕಿ ಉಳಿದಿರುವ ಜಮೀನುಗಳ ಸರ್ವೇ ಕಾರ್ಯ ತ್ವರಿತವಾಗಿ ನಡಸಲು ಅನುಕೂಲವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ 4020 ಭೂ ಮಾಪಕರಿದ್ದು, ಈ ಪೈಕಿ 3379 ಭೂಮಾಪಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ 2685 ಲೈಸನ್ಸ್‌ ಪಡೆದ ಭೂ ಮಾಪಕರನ್ನು ನೇಮಿಸಿಕೊಂಡು ಸರ್ವೇ ಕಾರ್ಯಕ್ಕೆ ನಿಯೋಜಿಸಿದೆ ಎಂದು ತಿಳಿಸಿದರು.

ಭೂ ಮಾಪಕರ ಕೊರತೆಯಿಂದ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇದ್ದು, ಆರು ತಿಂಗಳಲ್ಲಿ ಸರ್ವೇ ಪ್ರಕ್ರಿಯೆ ಮುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಉಕ್ರೇನ್‌ನಿಂದ ಭಾರತಕ್ಕೆ ವಾಪಸು ಮರಳಿದವರ ಬಗ್ಗೆ ಕ್ರಮ: ಭರವಸೆ

Advertisement

ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಯತೀಂದ್ರ, ಕುಮಾರ್‌ ಬಂಗಾರಪ್ಪ ಎಲ್ಲ ಕಡೆ ಭೂಮಾಪಕರ ಸಮಸ್ಯೆ ಇದೆ. ಇರುವ ಒಬ್ಬರಿಂದ ಏನೂ ಮಾಡಲು ಸಾಧ್ಯವಿಲ್ಲ. ಲೈಸನ್ಸ್‌ ಪಡೆದವರು ಎಲ್ಲವನ್ನೂ ಮಾಡಲಾಗದು. ಅವರಿಗೆ ಇತಿಮಿತಿ ಇರುವುದರಿಂದ ಭೂ ವ್ಯಾಜ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಏನಾದರೊಂದು ಪರಿಹಾರ ಹುಡುಕಿ ಎಂದು ಸಲಹೆ ಮಾಡಿದರು.

ಅದಕ್ಕೆ ಉತ್ತರಿಸಿದ ಸಚಿವ ಅಶೋಕ್‌, ಪರವಾನಗಿ ಹೊಂದಿದ ಭೂ ಮಾಪಕರಿಗೂ ಹಲವು ಅಧಿಕಾರ ಕೊಡಲಾಗಿದೆ. ಇಲಾಖೆಯಲ್ಲಿ ಹಲವು ಬದಲಾವಣೆ ತರಲು ತೀರ್ಮಾನಿಸಿದ್ದು, ಹೊಸ
ಸಾಫ್ಟ್ ವೇರ್‌ ಪರಿಚಯಿಸಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next