Advertisement

ನದಿ ಜೋಡಣೆ ವಿಚಾರಕ್ಕೆ ಸಚಿವ ಆರ್.ಅಶೋಕ್ ವಿರೋಧ

01:42 PM Feb 02, 2022 | Team Udayavani |

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆಯಾಗಬಾರದು. ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರದ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ನಮಗೆ ಅನ್ಯಾಯವಾಗುವ ರೀತಿಯಿದ್ದರೆ ನಾವು ಒಪ್ಪುವುದಿಲ್ಲ ಎಂದರು.

ಇದನ್ನೂ ಓದಿ:ಜಗತ್ತು ಬಲಿಷ್ಠ ಭಾರತವನ್ನು ನೋಡಲು ಬಯಸುತ್ತಿದೆ: ಪ್ರಧಾನಿ ಮೋದಿ

ಕೇಂದ್ರ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಪ್ರಗತಿಪರ ಬಜೆಟ್. ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬರ್ ಹಾಕಲಾಗುತ್ತಿದೆ. ಡಿಜಿಟಲ್ ಮುಖಾಂತರ ಶಿಕ್ಷಣ ಕೊಡಲು ತೀರ್ಮಾನ ಮಾಡಿದ್ದಾರೆ. ಎಸಿ ಎಸ್ಟಿ ರೈತರಿಗೆ ವಿಶೇಷ ಯೋಜನೆ ಘೋಷಣೆ ಮಾಡಿದ್ದಾರೆ. ದೂರದೃಷ್ಟಿಯಿಂದ ಯೋಜನೆ ಜಾರಿ ಮಾಡಲಾಗುತ್ತದೆ. ರಾಹುಲ್ ಗಾಂಧಿಗೆ ಬಜೆಟ್ ನಲ್ಲಿ ಏನಿದೆಯೆಂದೇ ಮಾಹಿತಿಯಿಲ್ಲ. ಬಜೆಟ್ ಮಂಡನೆ ಮುನ್ನವೇ ಇದೊಂದು ನಿರಾಶದಾಯಕ ಬಜೆಟ್ ಎಂದು ಹೇಳುತ್ತಿದ್ದರು. ಬಜೆಟ್ ಮಂಡನೆ ಮಾಡಿ ಅವರಿಗೆ ಅನುಭವ ಇಲ್ಲ, ಹೀಗಾಗಿ ಆ ರೀತಿ ಮಾತನಾಡುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next