Advertisement

ಸಚಿವ ಆರ್‌.ಶಂಕರ್‌,ಸಿ.ಪುಟ್ಟರಂಗ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

03:02 PM Jun 26, 2018 | Team Udayavani |

ಬೆಳ್ತಂಗಡಿ: ರಾಜ್ಯ ಅರಣ್ಯ ಸಚಿವ ಆರ್‌. ಶಂಕರ್‌ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು.

Advertisement

ಕುಟುಂಬ ಸಮೇತರಾಗಿ ಆಗಮಿಸಿದ ಸಚಿವ ಆರ್‌.ಶಂಕರ್‌ ಅವರು ಕ್ಷೇತ್ರಕ್ಕೆ ಆಗಮಿಸುವ ಮುನ್ನ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ರಾತ್ರಿ ಧರ್ಮಸ್ಥಳದಲ್ಲೇ ತಂಗಿದ್ದು, ಜೂ.26ರಂದು ಬೆಳಗ್ಗೆ 7.15ಕ್ಕೆ ಶಾಂತಿವನದಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಕೂಡ ಭಾಗವಹಿಸುವ ಸಾಧ್ಯತೆ ಇದೆ.

ಶಂಕರ್‌ ಅವರು ಈ ಹಿಂದೆ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದಿದ್ದಾರೆ. ಸಚಿವ ಪುಟ್ಟರಂಗ ಶೆಟ್ಟಿ ಅವರು ಕ್ಷೇತ್ರಕ್ಕೆ ತೆರಳಿದ ಬಳಿಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಜೂ. 28ಕ್ಕೆ ವಾಪಸು
ಕಳೆದ ಹಲವು ದಿನಗಳಿಂದ ಧರ್ಮ ಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರು ಜೂ. 28ರಂದು ತೆರಳಿದ್ದಾರೆ. ಶಾಂತಿವನದಿಂದ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಇದೆ.

Advertisement

Udayavani is now on Telegram. Click here to join our channel and stay updated with the latest news.

Next