Advertisement

ಸಚಿವ ರೇವಣ್ಣ ಶೃಂಗೇರಿಗೆ ಭೇಟಿ

10:59 PM Jul 09, 2019 | Team Udayavani |

ಶೃಂಗೇರಿ: ಶಾಸಕರ ರಾಜೀನಾಮೆಯಿಂದ ಮೈತ್ರಿ ಸರಕಾರ ಸಂಕಷ್ಟಕ್ಕೆ ಸಿಲುಕಿರುವ ಮಧ್ಯೆಯೇ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ದಕ್ಷಿಣಾಮ್ನಾಯ ಶೃಂಗೇರಿ ಪೀಠಕ್ಕೆ ಭೇಟಿ ನೀಡಿದ್ದಾರೆ.

Advertisement

ಮಂಗಳವಾರ ಬೆಳ್ಳಂಬೆಳಗ್ಗೆ ಶೃಂಗೇರಿಗೆ ಆಗಮಿಸಿದ ರೇವಣ್ಣ ಶಾರದಾಂಬೆಗೆ ಪೂಜೆ ಸಲ್ಲಿಸಿ, ನಂತರ ಉಭಯ ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಬೆಳಗ್ಗೆ 5.45ಕ್ಕೆ ಶ್ರೀ ಮಠಕ್ಕೆ ಆಗಮಿಸಿದ ಸಚಿವರು, ಶ್ರೀ ಶಾರದಾಂಬೆಗೆ ಸುಪ್ರಭಾತ ಪೂಜೆ ನೆರವೇರಿಸಿದರು. ಇದೇ ವೇಳೆ ಶ್ರೀ ಮಠದ ಒಳ ಆವರಣದಲ್ಲಿರುವ ಶ್ರೀ ಶಕ್ತಿ ಗಣಪತಿಗೆ ಪೂಜೆ ಸಲ್ಲಿಸಿದರು. ನಂತರ ತೋರಣ ಗಣಪತಿ, ಶ್ರೀ ಶಂಕರಚಾರ್ಯ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ನರಸಿಂಹ ವನದಲ್ಲಿರುವ ಗುರು ನಿವಾಸದಲ್ಲಿ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬೆಳಗ್ಗೆ 8.45ಕ್ಕೆ ವಾಪಸ್‌ ಬೆಂಗಳೂರಿಗೆ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next