Advertisement

ಮಾದರಿ ಆಡಳಿತಕ್ಕೆ ಸಹಕಾರ: ಎಸ್‌. ಅಂಗಾರ 

12:18 AM Aug 05, 2021 | Team Udayavani |

ಎರಡನೆ ಬಾರಿಗೆ ಸಚಿವ ಸ್ಥಾನ ದೊರೆತಿದೆ, ಏನಂತಿರಿ..?

Advertisement

ಪಕ್ಷ ಅವಕಾಶ ನೀಡಿದೆ. ಹಿಂದಿನ ಅವಧಿಯಲ್ಲಿ ಕೆಲಸ ನಿರ್ವಹಿಸಿರುವ ತೃಪ್ತಿ ಇದೆ. ಮಾದರಿ ಆಡಳಿತ ನೀಡುವಲ್ಲಿ ಸಹಕಾರ ನೀಡುತ್ತೇನೆ.

ಹಿಂದಿನ ಖಾತೆಯನ್ನು ಮತ್ತೆ ಬಯಸುತ್ತೀರಾ?

ಮುಖ್ಯಮಂತ್ರಿಗಳು ಯಾವುದೇ ಖಾತೆ ಕೊಟ್ಟರೂ ಅದಕ್ಕೆ ನ್ಯಾಯ ಒದಗಿಸುವುದು ನನ್ನ ಜವಾಬ್ದಾರಿ. ಅದನ್ನು ಅತ್ಯಂತ ಪ್ರಾಮಾಣಿಕತೆ, ನಿಷ್ಠೆಯಿಂದ ಮಾಡುತ್ತೇನೆ.

ಸಚಿವನಾಗಿ ಎದುರಾಗುವ ಸವಾಲುಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ಸಿದ್ಧತೆ ಹೇಗಿದೆ?

Advertisement

ಖಾತೆ ಹಂಚಿಕೆಯಾದ ಬಳಿಕ ಅದರ ನಿರ್ವಹಣೆ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತೇನೆ. ನನಗೆ ವಹಿಸಿಕೊಡುವ ಖಾತೆಯಲ್ಲಿ ಜನರಿಗೆ ಹೇಗೆ ಸ್ಪಂದಿಸಬಹುದು ಎನ್ನುವ ಬಗ್ಗೆ ಯೋಜನೆ ರೂಪಿಸಿ ಕಾರ್ಯನ್ಮುಖನಾಗುತ್ತೇನೆ.

ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಹೇಗೆ ಸ್ಪಂದಿಸುತ್ತಿರಿ?

ಈಗಾಗಲೇ ಸೇತುವೆ, ರಸ್ತೆ ಸೇರಿದಂತೆ ಮೂಲ ಸೌಕರ್ಯ ಒದಗಣನೆಗೆ ಸಾಕಷ್ಟು ಅನುದಾನ ನೀಡಲಾಗಿದೆ. ಇನ್ನೂ ಬೇಡಿಕೆಗಳಿವೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ತರುತ್ತೇನೆ. ಜನರ ವಿಶ್ವಾಸಕ್ಕೆ, ಪಕ್ಷದ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುತ್ತೇನೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next