Advertisement

ಸುಬ್ರಹ್ಮಣ್ಯ: ಮಳೆಹಾನಿ ಪ್ರದೇಶಗಳಿಗೆ ಸಚಿವ ಎಸ್.ಅಂಗಾರ ಭೇಟಿ

11:56 AM Aug 02, 2022 | Team Udayavani |

ಸುಬ್ರಹ್ಮಣ್ಯ: ಭಾರೀ ಮಳೆಗೆ ಹಾನಿಗೊಳಗಾದ ಘಟನಾ ಸ್ಥಳಗಳಿಗೆ ಸಚಿವ ಎಸ್.ಅಂಗಾರ ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಹರಿಹರ ಪಲ್ಲತ್ತಡ್ಕ ಗ್ರಾಮದ ಹರಿಹರ ಪೇಟೆಯಲ್ಲಿ ಭಾರೀ ಹಾನಿ ಸಂಭವಿಸಿದ್ದು ಘಟನಾ ಸ್ಥಳದಲ್ಲಿ ಜನಸ್ತೋಮವೇ ಸೇರಿದೆ.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಎಸ್.ಅಂಗಾರ, ಮಳೆಯಿಂದ ಉಂಟಾದ ಹಾನಿಗಳ ಬಗ್ಗೆ ಮಾಹಿತಿ ಪಡೆದ ಕೂಡಲೇ ಆಗಮಿಸಿದ್ದೇನೆ. ರಾತ್ರಿ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ಇಂದು ಬೆಳಗ್ಗೆ ಹರಿಹರ ಪಲ್ಲತ್ತಡ್ಕ ಕ್ಕೆ ಭೇಟಿ ನೀಡಿದ್ದೇನೆ. ಮನೆ ಹಾನಿ, ಇತರೆ ಹಾನಿ, ರಸ್ತೆ, ಸೇತುವೆ ಹಾನಿಗಳ ಬಗ್ಗೆ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ತುರ್ತು ಕ್ರಮಕ್ಕೆ ಕೂಡಲೇ ಕ್ರಮಕೈಗೊಳ್ಳಲಾಗುವುದು. ಈಗಿನಿಂದಲೇ ಪರಿಹಾರ ಕಾರ್ಯ ನಡೆಸಲಾಗುತ್ತಿದೆ ಎಂದ ಅವರು ಘಟನೆಗಳ ಬಗ್ಗೆ ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡುವ ಕೆಲಸ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next