Advertisement

ಹೂವು, ತರಕಾರಿ ಬೆಳೆಗಾರರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಎಸ್.ಟಿ ಸೋಮಶೇಖರ್

02:35 PM Apr 18, 2020 | Team Udayavani |

ಚಿತ್ರದುರ್ಗ: ಹೂವು, ತರಕಾರಿ ಬೆಳೆಗಾರರಿಗೆ ಆಗಿರುವ ಸರ್ಕಾರದಿಂದ ಪರಿಹಾರ ನೀಡಲು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.

Advertisement

ಚಿತ್ರದುರ್ಗದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೇರೆ ಜಿಲ್ಲೆ, ರಾಜ್ಯಕ್ಕೆ ತರಕಾರಿ, ಹಣ್ಣು ಸಾಗಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದರು. ಹೊರ ರಾಜ್ಯಕ್ಕೆ ಹಣ್ಣು, ತರಕಾರಿ, ಸರಬರಾಜು ಮಾಡುವ ಲಾರಿ ಪರೀಕ್ಷಿಸುವಂತಿಲ್ಲ ಎಂದು ಸ್ಪಷ್ಟ ಪಡಿಸಿದರು.

ಸಾಮೂಹಿಕ ನಮಾಜ್ ಮಾಡುವಂತಿಲ್ಲ.

ರಂಜಾನ್ ವೇಳೆ ಮನೆಯಲ್ಲಿಯೇ ನಮಾಜ್ ಮಾಡಲು ಸರ್ಜಾರ ಕಟ್ಟುನಿಟ್ಟಾಗಿ ಸೂಚಿಸಿದೆ ಎಂದು ಹೇಳಿದರು. ದೆಹಲಿ ತಬ್ಲೀಘಿ ಜಮಾತ್ ಗೆ ಹೋಗಿ ಬಂದವರು ಕಡ್ಡಾಯವಾಗಿ ಚಿಕಿತ್ಸೆಗೆ ಒಳಪಡಬೇಕು ಎಂದರು.

ರೈತರಿಗೆ ಗ್ರೀನ್ ಪಾಸ್

Advertisement

ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಗ್ರೀನ್ ಪಾಸ್ ನೀಡಲಾಗುತ್ತಿದೆ. ಈ ವಿಚಾರದಲ್ಲಿ ಡೂಪ್ಲಿಕೇಟ್ ಪಾಸ್ ಕಂಡು ಬಂದಲ್ಲಿ ಕೂಡಲೇ ಬಂಧಿಸಲಾಗುವುದು  ಎಂದು ಎಚ್ಚರಿಕೆ ನೀಡಿದರು.

ಬಾರ್, ತೆರೆದರೆ ‌ಸಾಮಾಜಿಕ ಅಂತ ಕಾಯ್ದುಕೊಳ್ಳುವುದು ಅಸಾಧ್ಯ. ಸರ್ಕಾರದ ಬೊಕ್ಕಸಕ್ಕೆ ನಷ್ಟವಾದರೂ ಸಹ ತೆರೆಯುವ ತೀರ್ಮಾನವಿಲ್ಲ ಎಂದರು. ಚಿತ್ರದುರ್ಗದಲ್ಲಿ ಮುರುಘಾ ಮಠ, ಎಪಿಎಂಸಿ ಹಾಗೂ ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ದಾವಣಗೆರೆಗೆ ತೆರಳಿದರು.

Advertisement

Udayavani is now on Telegram. Click here to join our channel and stay updated with the latest news.

Next