Advertisement

ಅಪೌಷ್ಟಿಕ ಮಕ್ಕಳ ಆರೋಗ್ಯಕ್ಕೆ ಒತ್ತು: ಸಚಿವೆ ಶಶಿಕಲಾ ಜೊಲ್ಲೆ

01:27 PM Jun 11, 2021 | Team Udayavani |

ರಾಯಚೂರು: ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಮುಖ್ಯವಾಗಿ ಅಪೌಷ್ಟಿಕ ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಇದೇ ಕಾರಣಕ್ಕೆ ಕಲ್ಯಾಣ ಕರ್ನಾಟಕ ಭಾಗದ ಆರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮೂರನೇ ಅಲೆಯಲ್ಲಿ ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಕುರಿತು ತಜ್ಞರ ಜತೆ ಚರ್ಚಿಸಲಾಗುವುದು.  ಮಕ್ಕಳಿಗೆ ಪೌಷ್ಟಿಕ ಆಹಾರ ಹೇಗೆ ನೀಡಬೇಕು ಎಂದು ಕುರಿತು ಚರ್ಚಿಸಲಾಗುವುದು. ಯಾವುದೇ ಔಷಧ ಕೊರತೆ ಇಲ್ಲ. ಎಲ್ಲ ಜಿಲ್ಲೆಗಳಲ್ಲಿ ಬೆಡ್ ವೆಂಟಿಲೇಟರ್ ಹಾಗೂ ವೈದ್ಯರ ಮಾಹಿತಿ ಪಡೆದಿದ್ದು, ಕೊರತೆ ಕಂಡು ಬಂದಿದೆ. ಕೊರತೆ ನೀಗಿಸಲು ಒತ್ತು ನೀಡಲಾಗುವುದು ಎಂದರು.

ಇದನ್ನೂ ಓದಿ:ಮುಂದಿನ ಎರಡು ವರ್ಷ ನಾನೇ ಸಿಎಂ: ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ

ಎರಡನೇ ಅಲೆಯಲ್ಲಿ 2650 ಮಕ್ಕಳು ಸೋಂಕು ತಗುಲಿತ್ತು. ಪೋಸ್ಟ್ ಕೋವಿಡ್ ಸಮಸ್ಯೆ ಮಕ್ಕಳಲ್ಲಿ ಕಂಡುಬರುತ್ತಿದೆ. ಈ ಕುರಿತು ಆರೋಗ್ಯ ಇಲಾಖೆ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next