Advertisement

ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

09:47 AM Oct 26, 2021 | Team Udayavani |

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಪ್ರತಿ ಎರಡು ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿ ನೀಡಿದೆ. ಉಸ್ತುವಾರಿ ಹೊಣೆ ಹೊತ್ತಿರುವ ಎಲ್ಲಾ ಸಚಿವರೂ ಸಮರ್ಥವಾಗಿ ಚುನಾವಣೆ ಸಂಘಟನೆ ನಡೆಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಸಿ.ಸಿ. ಪಾಟೀಲ, ವಿ.ಸೋಮಣ್ಣ ಸೇರಿ ಹಲವು ಸಚಿವರಿಗೆ ವಿವಿಧ ಜಿ.ಪಂ. ಕ್ಷೇತ್ರಗಳಲ್ಲಿ ಜವಾಬ್ದಾರಿ ನೀಡಲಾಗಿದೆ ಎಂದರು.

ಇದನ್ನೂ ಓದಿ:ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಸಿಂದಗಿ ಕ್ಷೇತ್ರದಲ್ಲಿ ಕೋವಿಡ್, ಪ್ರವಾಹ ಸಂದರ್ಭದಲ್ಲಿ ಜನರ ನೆರವಿಗೆ ಧಾವಿಸಿದ್ದೇವೆ. ಹೀಗಾಗಿ ಕ್ಷೇತ್ರದ ಜನರು ಬಿಜೆಪಿ ಪರ ಒಲವು ತೋರಿದ್ದಾರೆ ಎಂದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ರಾಜ್ಯದಲ್ಲಿ ಈ ಹಿಂದೆ ಯಡಿಯೂರಪ್ಪ ಸರ್ಕಾರ, ಈಗ ಬಸವರಾಜ ಬೊಮ್ಮಾಯಿ ಸರ್ಕಾರಗಳ ಸಾಧನೆಗಳನ್ನು ಜನರ ಮುಂದೆ ಹೇಳುವ ಮೂಲಕ ಮತಯಾಚನೆ ಮಾಡಲಾಗುತ್ತಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next