Advertisement

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಕಡಿಮೆಯಾಗಿದೆ: ಸಚಿವೆ ಶಶಿಕಲಾ ಜೊಲ್ಲೆ

04:19 PM Nov 01, 2022 | Team Udayavani |

ಹೊಸಪೇಟೆ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಕಡಿಮೆಯಾಗಿದೆ ಎಂದು ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೊದಲಿನಷ್ಟು ಪುಂಡಾಟಿಕೆ ಇಲ್ಲ. ಎಂಇಎಸ್ ಪುಂಡಾಟ ಬಹಳಷ್ಟು ಕಡಿಮೆಯಾಗುತ್ತಿದೆ ಎಂದರು.

ನನ್ನ ಕ್ಷೇತ್ರ ನಿಪ್ಪಾಣಿಯಲ್ಲೇ ಕನ್ನಡ ರಾಜ್ಯೋತ್ಸವ ಹಿಂದೆ ಆಚರಣೆ ಮಾಡುತ್ತಿರಲಿಲ್ಲ. ಅಂತಹ ಸಂದರ್ಭ ಈ ಹಿಂದೆ ಇತ್ತು. ಆದರೆ ಈಗ ರಾಜ್ಯದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಈಗ‌ ಯುವ ಪೀಳಿಗೆ ಎಚ್ಚೆತ್ತುಕೊಂಡಿದೆ. ಹಿಂದೆ ಇರುವ ವಾತಾವರಣ ಈಗಿಲ್ಲ ಎಂದು ಹೇಳಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಬಹಿರಂಗ ಅಸಮಾಧಾನ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ‌ ನಳೀನ್ ಕುಮಾರ್ ಕಟೀಲ್ ಬಗೆಹರಿಸುತ್ತಾರೆ ಎಂದ ಅವರು ಜನಾರ್ಧನ ರೆಡ್ಡಿಯವರ ಅಸಮಾಧಾನ, ಸಮಸ್ಯೆ ಏನೇ ಇರಲಿ ವರಿಷ್ಟರು, ಬಗೆಹರಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next