Advertisement

ಯಾರೇ ಮೃತಪಟ್ಟರೂ ಸ್ಥಳೀಯ ಸಂಸ್ಥೆಗೆ ಮಾಹಿತಿ ನೀಡಲು ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

01:32 PM Apr 13, 2020 | keerthan |

ವಿಜಯಪುರ: ಕೋವಿಡ್-19 ಸಾಂಕ್ರಾಮಿಕ ರೋಗ ನಿಗ್ರಹಕ್ಕಾಗಿ ಯಾವುದೇ ವ್ಯಕ್ತಿ ಮೃತಪಟ್ಟರೂ ಅವರ ಸಾವಿನ ಕುರಿತು ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಮಾಹಿತಿ ನೀಡುವುದನ್ನು ಕಡ್ಡಾಯ ಆದೇಶ ಹೊರಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.

Advertisement

ಸೋಮವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕೋವಿಡ್-19 ಸೋಂಕು ನಿಗ್ರಹದ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಗ್ರಾಮೀಣ ಭಾಗದಲ್ಲಿ ಯಾರೇ ಮೃತಪಟ್ಟರೂ ಮೃತರ ಕುಟುಂಬ ಸದಸ್ಯರು ಗ್ರಾ.ಪಂಚಾಯತ್ ಮಾಹಿತಿ ನೀಡಬೇಕು. ಗ್ರಾ.ಪಂಚಾಯತ್ ನವರು ತಾಲೂಕ ಪಂಚಾಯತ ಇಒ ಗಳಿಗೆ, ನಗರ-ಪಟ್ಟಣ‌ ಪ್ರದೇಶದಲ್ಲಿ ಮೃತರಾದರೆ ಸ್ಥಳೀಯ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗೆ ಮಾಹಿತಿ ನೀಡುವುದು ಕಡ್ಡಾಯ ಮಾಡಿ ಆದೇಶ ಹೊರಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next