Advertisement

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಕ್ಕೆ ಸಚಿವ ಶಿವರಾಮ ಹೆಬ್ಬಾರ್ ಭೇಟಿ

08:27 PM Aug 14, 2021 | Team Udayavani |

ಬೆಳ್ತಂಗಡಿ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು (ಆ.14) ತಾಲೂಕಿನ ಉಜಿರೆಯ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಕ್ಕೆ ಭೇಟಿ ನೀಡಿದರು.

Advertisement

ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ 22ನೇ ದಿನದಂದು ಸಚಿವರು ಕುಟುಂಬ ಸಮೇತವಾಗಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿಯಾಗಿ ಪಾದುಕಾ ಪೂಜೆ ನೆರವೇರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ ಸದಸ್ಯರಾದ ಪ್ರತಾಪ್ ಸಿಂಹ ನಾಯಕ ಹಾಗೂ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next