Advertisement

ಸಂಕಷ್ಟದ ಸಮಯದಲ್ಲಿ ರಾಜಕಾರಣ ಸರಿಯಲ್ಲ : ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ಕಿಡಿ

06:27 PM May 15, 2021 | Team Udayavani |

ಚಿತ್ರದುರ್ಗ:  ಸಂಕಷ್ಟದ ಸಮಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಪಕ್ಕದ ಮನೆಗೆ ಬೆಂಕಿಬಿದ್ದಾಗ ಆರಿಸುವ ಕೆಲಸ ಮಾಡಬೇಕೆ ಹೊರತು, ಚಳಿ ಕಾಯಿಸಿಕೊಳ್ಳುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್  ವಿರುದ್ದ ಸಚಿವ ಬಿ.ಶ್ರೀರಾಮುಲು ಹರಿಹಾಯ್ದರು.

Advertisement

ಇಂದು ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ತಾಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಮಾತನಾಡಿರುವ ಅವರು,  ರಾಜ್ಯ, ದೇಶ ಸಂಕಷ್ಟದಲ್ಲಿದ್ದಾಗ ಪರಿಹಾರದ ಸಲಹೆ ನೀಡಲಿ. ಆದರೆ,  ಪ್ರತಿಭಟನೆ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದರು.

ಜಿಲ್ಲೆಯಲ್ಲಿ ರೆಮ್‌ಡಿಸಿವಿರ್, ಆಕ್ಸಿಜನ್, ಬೆಡ್ ಕೊರತೆ ಆಗದಂತೆ  ಸಿಎಂ ಬಿಎಸ್ ವೈ ಜತೆ ಈ ಬಗ್ಗೆ ಮಾತನಾಡಿ‌ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಲಾಕ್ ಡೌನ್ ನಿಂದ ಈಗ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ.  ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರ. ತಜ್ಞರಿಂದ ಮಾಹಿತಿ ಪಡೆದು ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸಿಎಂ ಕ್ರಮ ತೆಗೆದುಕೊಳ್ಳಲಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಗೆ ಹೆಚ್ಚಿನ ಹಣ ವಸೂಲಿ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಹೆಚ್ಚಿನ ಹಣ ವಸೂಲಿ ಮಾಡಿದರೆ ಆಸ್ಪತ್ರೆ ಲೈಸನ್ಸ್ ರದ್ದುಗೊಳಿಸುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next