Advertisement

ವರಿಷ್ಠರಿಂದ ದೆಹಲಿಗೆ ಬುಲಾವ್ ಗೂ, ಶಾಸಕ ಪಾಟೀಲ ಪತ್ರಕ್ಕೂ ಸಂಬಂಧವಿಲ್ಲ:ಸಚಿವ ಶಿವಾನಂದ ಪಾಟೀಲ

12:33 PM Jul 31, 2023 | Team Udayavani |

ವಿಜಯಪುರ: ಸರ್ಕಾರ ರಚನೆ ಬಳಿಕ ಸಂಪುಟದ ಹಿರಿಯ ಸಚಿವರು, ನಾಯಕರನ್ನು ವರಿಷ್ಠರು ದೆಹಲಿಗೆ ಕರೆದಿದ್ದಾರೆ. ಆದರೆ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ ಬರೆದ ಪತ್ರಕ್ಕೂ, ಸಚಿವರ ದೆಹಲಿ ಭೇಟಿಗೂ ಸಂಬಂಧವಿಲ್ಲ. ಇದು ಕಾಕತಾಳೀಯ ಅಷ್ಟೇ ಎಂದು ಸಕ್ಕರೆ, ಜವಳಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ.

Advertisement

ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಲವು ಶಾಸಕರು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಕುರಿತು ಸಮಜಾಯಿಷಿ ನೀಡಿದರು. ಸರ್ಕಾರ ರಚನೆಯಾದ ಬಳಿಕ ಸಚಿವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಕೇರಳ ಮಾಜಿ ಮುಖ್ಯಮಂತ್ರಿ ನಿಧನದ ಹಿನ್ನೆಲೆಯಲ್ಲಿ ಭೇಟಿ ರದ್ದಾಗಿತ್ತು. ಹೀಗಾಗಿ ಇದೀಗ ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿ ಭೇಟಿ ಆಗಲಿದ್ದೇವೆ ಎಂದರು.

ಸಚಿವರ ದೆಹಲಿ ಭೇಟಿಗೂ, ಬಿ.ಆರ್.ಪಾಟೀಲ ಸೇರಿದಂತೆ ಶಾಸಕರು ಬರೆದಿರುವ ಪತ್ರಕ್ಕೂ ಸಂಬಭವಿಲ್ಲ. ಅದು ಕಾಕತಾಳೀಯ ಅಷ್ಟೇ ಎಂದರು.

ಇದನ್ನೂ ಓದಿ:Tamannaah: “ಈ ಸಿನಿಮಾ ಸೋಲುತ್ತದೆ ಎಂದು ಶೂಟಿಂಗ್‌ ಸಮಯದಲ್ಲೇ ನನಗೆ ಗೊತ್ತಿತ್ತು”: ತಮನ್ನಾ

ಶಾಸಕರಿಗೆ ಅಧಿಕಾರಿಗಳ ಬದಲಾವಣೆ ಸೇರಿದಂತೆ ಕ್ಷೇತ್ರದಲ್ಲಿ ಕೆಲಸಗಳಾಗಬೇಕು ಎಂಬ ಬಯಕೆ ಇರುತ್ತದೆ. ಶೇ.6 ಕ್ಕಿಂತ. ಹೆಚ್ಚು ವರ್ಗಾವಣೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿಗಳೇ ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಮನವರಿಕೆ ಮಾಡಿದ್ದಾರೆ ಎಂದರು.

Advertisement

ಶಾಸಕಾಂಗ ಸಭೆಯಲ್ಲಿ ಶಾಸಕರು ಎತ್ತಿದ ಸಮಸ್ಯೆ ಬಗ್ಗೆ ಪರಿಹಾರ ಕಂಡುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಭೆಯಲ್ಲಿ ನಡೆಯುವ ಮುಕ್ತ ಚರ್ಚೆಯನ್ನು ಅಸಮಾಧಾನ ಎನ್ನಲಾಗದು. ಆಂತರಿಕ ಚರ್ಚೆಯನ್ನು ಭಿನ್ಯಮತ ಎಂದೂ ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಹೇಳಿದರು.

136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು ಯಾರಾದಾರೂ ಏಕೆ ಸರ್ಕಾರ ಪತನಕ್ಕೆ ಯತ್ನಿಸುತ್ತಾರೆ. ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ‌.ದೇವೇಗೌಡ ಅವರೇ ಹೇಳಿದ್ದು, ಸರ್ಕಾರ ಪತನ ಎಂಬುದು ಕೇವಲ ಊಹಾಪೋಹ ಮಾತ್ರ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next