Advertisement

ಬೆಂಗಳೂರು ನಗರ ಉಸ್ತುವಾರಿಗಾಗಿ ಸಚಿವ ವಿ. ಸೋಮಣ್ಣ ಪಟ್ಟು

03:12 PM Oct 09, 2021 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ. ವಸತಿ ಸಚಿವ ವಿ.ಸೋಮಣ್ಣ ಅವರು ಮಾಧ್ಯಮದವರ ಎದುರೇ ಈ ಬಗ್ಗೆ ಮಾತನಾಡಿದ್ದು, ಹಿರಿಯನಾದ ತನಗೆ ಈ ಸ್ಥಾನ ಸಿಗಬೇಕು ಎಂದಿದ್ದಾರೆ.

Advertisement

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ಬೆಂಗಳೂರು ಜಿಲ್ಲಾ ಉಸ್ತುವಾರಿ ಯಾರಿಗೆ ಬೇಕಾದರೂ ಕೊಡಲಿ. ಆದರೆ ಉಸ್ತುವಾರಿ ಕೊಡುವಾಗ ಜೇಷ್ಠತೆ ಪರಿಗಣಿಸಲಿ. ನಾನು ಬೆಂಗಳೂರಿನ ಹಿರಿಯ ಸಚಿವ ನನ್ನನ್ನು ಪರಿಗಣಿಸಿ ಎಂದು ಸಿಎಂಗೆ ಕೇಳಿದ್ದೇನೆ ಎಂದರು.

ಇದನ್ನೂ ಓದಿ:ಬಿಜೆಪಿಯವರು ಓಟಿಗಾಗಿ ಸೆಕ್ಯೂಲರ್ ಆಗಲು ಹೊರಟಿದ್ದಾರೆ: ಪ್ರಮೋದ್ ಮುತಾಲಿಕ್ ವಾಗ್ದಾಳಿ

ಸಚಿವ ವಿ ಸೋಮಣ್ಣ ಅವರು ಹೊಸ ಪ್ರಸ್ತಾಪ ಇಟ್ಟಿದ್ದು, ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ಹೊಣೆ ವಿಭಾಗಿಸಲಿ. ಬೆಂಗಳೂರಿಗೆ ಬೇಕಾದರೆ ಇಬ್ಬರು ಉಸ್ತುವಾರಿ ಮಾಡಲಿ. ನನಗರ್ಧ ಬೆಂಗಳೂರು, ಆರ್.ಅಶೋಕ್ ಗೆ ಅರ್ಧ ಬೆಂಗಳೂರು ಉಸ್ತುವಾರಿ ಕೊಡಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next