Advertisement
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಐಟಿ ದಾಳಿ ಸಹಜವಾದ ಪ್ರಕ್ರಿಯೆಯಾಗಿದೆ. ಇದು ಸ್ವಾಭಾವಿಕ ವಿಷಯ. ಈ ದಾಳಿ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಐಟಿ ದಾಳಿಗೂ ಮತ್ತು ಬಿಎಸ್ ವೈ ಆಪ್ತ ಎಂಬುವುದಕ್ಕೂ ಸಂಬಂಧ ಕಲ್ಪಿಸುವುದು ಸಲ್ಲದು ಎಂದು ಹೇಳಿದರು.
Related Articles
Advertisement
ಆಕ್ಸಿಜನ್ ಘಟಕಗಳ ಉದ್ಘಾಟನೆ: ನಂತರ ಜಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಸ್ಥಾಪಿಸಲಾದ ಎರಡು ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸಚಿವರಾದ ಸೋಮಣ್ಣ ಮತ್ತು ಸಿ.ಸಿ.ಪಾಟೀಲ ಉದ್ಘಾಟಿಸಿದರು.
ಪಿಎಂ ಕೇರ್ಸ್ ಅನುದಾನದಲ್ಲಿ ಸ್ಥಾಪಿಸಲಾದ 1 ಸಾವಿರ ಎಲ್ ಪಿಎಂ ಮತ್ತು ಎಲ್ ಆ್ಯಂಡ್ ಟಿ ಕಂಪನಿಯ ಸಿ ಎಸ್ಆರ್ ನಿಧಿಯಲ್ಲಿ ಸ್ಥಾಪಿಸಲಾದ 500 ಎಲ್ ಪಿಎಂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ್, ಶಾಸಕ ಬಸವರಾಜ ಮತ್ತಿಮಡು, ಎಂಎಲ್ ಸಿ ಬಿ.ಜಿ.ಪಾಟೀಲ, ಜಿಮ್ಸ್ ನಿರ್ದೇಶಕಿ ಡಾ.ಕವಿತಾ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ.ಶಫಿಯೋದ್ಧಿನ್, ಜಿಲ್ಲಾ ಸರ್ಜನ್ ಡಾ.ಅಂಬಾರಾಯ ರುದ್ರವಾಡಿ ಇದ್ದರು.