Advertisement

ಮುಂಡರಗಿ: ವಿಷ ಸೇವಿಸಿ ಮೃತಪಟ್ಟ ರೈತ ಮಹಿಳೆಯ ಮೂವರು ಮಕ್ಕಳನ್ನು ದತ್ತು ಪಡೆದ ಶ್ರೀರಾಮುಲು

06:11 PM Mar 13, 2022 | Team Udayavani |

ಮುಂಡರಗಿ (ಗದಗ): ತಾಲೂಕಿನ ಕೇಲೂರು ಗ್ರಾಮದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ವಿಷ ಸೇವಿಸಿ ಮೃತಪಟ್ಟ ರೈತ ಮಹಿಳೆಯ ಮೂವರ ಮಕ್ಕಳನ್ನು ಶೈಕ್ಷಣಿವಾಗಿ ದತ್ತು ಪಡೆದು, ಅವರ ಶಿಕ್ಷಣದ ಸಂಪೂರ್ಣ ಖರ್ಚು, ವೆಚ್ಚಗಳನ್ನು ತಾವೇ ಭರಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

Advertisement

ತಾಲೂಕಿನ ಕೇಲೂರು ಗ್ರಾಮಕ್ಕೆ ರವಿವಾರ ಭೇಟಿ ನೀಡಿ ಮೃತಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇ

ದೇ ವೇಳೆ ಮೃತ ರೈತ ಮಹಿಳೆ ನಿರ್ಮಲಾ ಪಾಟೀಲ ಅವರ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅದೇ ಗ್ರಾಮದ ಮತ್ತೋರ್ವ ಸರೋಜಾ ಪಾಟೀಲ ಅವರ ಕುಟುಂಬಕ್ಕೆ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದರು.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಪ್ರಕರಣದಲ್ಲಿ ಭಾಗಿಯಾದ ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next