Advertisement

ಪಾವಗಡ ದುರಂತ: ಖಾಸಗಿ ಬಸ್‌ ಪರವಾನಿಗೆ ರದ್ದು: ಸಚಿವ ಬಿ. ಶ್ರೀರಾಮುಲು

11:22 PM Mar 21, 2022 | Team Udayavani |

ಬೆಂಗಳೂರು: ಪಾವಗಡ ಬಸ್‌ ದುರಂತ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಮಾರ್ಗದಲ್ಲಿನ ಖಾಸಗಿ ಬಸ್‌ಗಳ ಪರವಾನಿಗೆ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.

Advertisement

ಕಾಂಗ್ರೆಸ್‌ ಸದಸ್ಯ ರಾಜೇಂದ್ರ ರಾಜಣ್ಣ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಮಿತಿಮೀರಿ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದಕ್ಕೆ ಅಧಿಕ ಭಾರದಿಂದ ಅಪಘಾತ ಸಂಭವಿಸಿದೆ. ದುರಂತದಲ್ಲಿ 6 ಮಂದಿ ಸಾವಿಗೀಡಾಗಿದ್ದು, 43 ಮಂದಿ ಗಾಯಗೊಂಡಿದ್ದಾರೆ ಎಂದರು.

ಇದನ್ನೂ ಓದಿ:ನೀಟ್‌: ಆರ್ಥಿಕ ದುರ್ಬಲ ವರ್ಗಕ್ಕೆ ಶೇ.10 ಮೀಸಲಾತಿ

ಅಲ್ಲದೇ ತುಮಕೂರು-ಪಾವಗಡ ಮಾರ್ಗದಲ್ಲಿ ಸಾರಿಗೆ ನಿಗಮದ 14 ಬಸ್‌ಗಳನ್ನು ಹಾಕಲಾಗಿದೆ. ಹೆಚ್ಚುವರಿಯಾಗಿ 40 ಹಳ್ಳಿಗಳಿಗೆ ಬಸ್‌ ಸೌಲಭ್ಯ ಸಿಗಲಿದೆ. ಮೃತರಿಗೆ ಸರಕಾರದಿಂದ ತಲಾ 5 ಲಕ್ಷ ರೂ. ಹಾಗೂ ವೈಯುಕ್ತಿಕವಾಗಿ ನಾನು 1 ಲಕ್ಷ ರೂ. ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next