Advertisement

ಆಯುಧ ಪೂಜೆಯಂದು ಸರ್ಕಾರಿ ಬಸ್ಸುಗಳ  ಪೂಜೆಗೆ ಸಚಿವ ಶ್ರೀರಾಮುಲು ಸೂಚನೆ

07:14 PM Oct 12, 2021 | Team Udayavani |

ಬೆಂಗಳೂರು: ಆಯುಧ ಪೂಜೆಯ ದಿನದಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ  ಎಲ್ಲಾ  ಪ್ರಯಾಣಿಕ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಸಂಪ್ರದಾಯದಂತೆ ಪೂಜಿಸಬೇಕು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದ್ದಾರೆ.

Advertisement

ಪೂಜೆಗೆ ನೆರವಾಗುವಂತೆ ಪ್ರತಿ ವಾಹನಕ್ಕೆ 100 ರೂ ಮತ್ತು ಪ್ರತಿ  ವಿಭಾಗೀಯ ಕಾರ್ಯಾಗಾರಕ್ಕೆ 1000 ರೂ ಮುಂಗಡ ನಗದು  ಪಡೆದು ಈ ಪೂಜಾ ಕಾರ್ಯಕ್ಕೆ ಎಂದಿನಂತೆ ವಿನಿಯೋಗಿಸಿ, ಆಚರಿಸಬೇಕು ಎಂದು ತಿಳಿಸಿದ ಅವರು, ರಾಜ್ಯದ ಸಮಸ್ತ ಜನತೆಗೆ,  ಕರ್ನಾಟಕ ರಾಜ್ಯ  ರಸ್ತೆ ಸಾರಿಗೆ ಸಂಸ್ಥೆಯ ಸಮಸ್ತ ನೌಕರರಿಗೆ , ಅಧಿಕಾರಿಗಳಿಗೆ  ದಸರಾ ನಾಡಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ನಾಡದೇವತೆ ಚಾಮುಂಡೇಶ್ವರಿ ಎಲ್ಲರಿಗೂ ಸುಖ, ಸಂತೋಷ, ಆರೋಗ್ಯವನ್ನು ಅನುಗ್ರಹಿಸಲಿ. ಸಾಂಕ್ರಾಮಿಕದ ಕರಿನೆರಳು ದೂರ ಸರಿದು, ಸಂಭ್ರಮ ಸಮೃದ್ಧಿಗಳ ಹೊಂಗಿರಣ  ಮೂಡಲಿ ಎಂದು ಸಚಿವರು ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next