Advertisement

ವಿವಿಧ ಕ್ಷೇತ್ರಗಳ ಗಣ್ಯರೊಂದಿಗೆ ಸಚಿವ ಸುಧಾಕರ್‌ ಚರ್ಚೆ

02:19 AM May 03, 2020 | Sriram |

ಬೆಂಗಳೂರು: ಲಾಕ್‌ಡೌನ್‌ ತೆರವಿನ ಬಳಿಕ ಎದುರಾಗುವ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಮಾರ್ಗೋಪಾಯಗಳ ಬಗ್ಗೆ ವಿವಿಧ ಗಣ್ಯರ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಸಮಾಲೋಚನೆ ನಡೆಸಿದರು.

Advertisement

ಮೊದಲ ಹಂತದಲ್ಲಿ ಕನ್ನಡ ಚಿತ್ರರಂಗ ಮತ್ತು ಕ್ರೀಡಾಲೋಕದ ದಿಗ್ಗಜರ ಜತೆ ಶನಿವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದರು. ಕೋವಿಡ್-19 ವೈರಾಣು ಜತೆಗೆ ಮುಂಬರುವ ದಿನಗಳಲ್ಲಿ ಬದುಕು ನಡೆಸುವ ಅನಿವಾರ್ಯ ಎದುರಾಗಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಅನುಸರಿಸಬೇಕಿರುವ ಕ್ರಮಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಯಿತು.

2 ತಾಸುಗಳ ಕಾಲ ನಡೆದ ಸಮಾಲೋಚನೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು ಸರಕಾರ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ಜನತೆಯ ಸುರಕ್ಷತೆ ಮತ್ತು ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next