Advertisement

ಸತೀಶ್ ಜಾರಕಿಹೊಳಿ ಹೇಳಿಕೆಗೆ ಸಚಿವ ಸುನಿಲ್ ಕುಮಾರ್ ಆಕ್ರೋಶ

10:11 PM Nov 07, 2022 | Team Udayavani |

ಬೆಂಗಳೂರು: ನನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ.ಹಿಂದೂ, ಹಿಂದುತ್ವ ಹಾಗೂ ಹಿಂದೂ ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದ್ದು, ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಕಿಡಿ ಕಾರಿದ್ದಾರೆ.

Advertisement

”ಸತೀಶ್ ಜಾರಕಿಹೊಳಿಗೆ ಹಿಂದೂ ಶಬ್ದ ಅಶ್ಲೀಲ.ಸಿದ್ದರಾಮಯ್ಯ ಅವರಿಗೆ ಕೇಸರಿ-ತಿಲಕ ಕಂಡರೆ ಭಯ. ಡಿ.ಕೆ.ಶಿವಕುಮಾರ್ ಗೆ ಮುಸ್ಲಿಮರು ಸೋದರರು. ಎಂ.ಬಿ.ಪಾಟೀಲರಿಗೆ ಹಿಂದೂ ಧರ್ಮದ ಅಖಂಡತೆ ಒಡೆಯುವ ಯೋಚನೆ. ಇವೆಲ್ಲವೂ ಕಾಂಗ್ರೆಸ್ ಒಳಮನಸಿನಲ್ಲಿರುವ ಹಿಂದೂ ವಿರೋಧಿ ಭಾವಗಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಸತೀಶ್‌ ಜಾರಕಿಹೊಳಿ ‘ಹಿಂದೂ’ ವಿವಾದ : ಖಂಡಿಸಿದ ಸುರ್ಜೇವಾಲಾ

ಹಿಂದುತ್ವ ಎಂಬ ಜೀವನ ಪದ್ಧತಿಯನ್ನೇ ಟೀಕಿಸಿದ ಸತೀಶ್ ಜಾರಕಿಹೊಳಿ ಪರವಾಗಿ ಕಾಂಗ್ರೆಸ್ ಇಡಿ ರಾಷ್ಟ್ರದ ಕ್ಷಮೆ ಯಾಚಿಸಬೇಕು. ಇದು ವೈಯಕ್ತಿಕ ಅಭಿಪ್ರಾಯ ಎಂದು ಕೈ ತೊಳೆದುಕೊಳ್ಳುವ ನಾಟಕ ಬೇಡ. ಮಾನ್ಯ ಸುರ್ಜೇವಾಲಾ ಅವರೇ, ಭಾರತೀಯತೆಗೆ ಅಪಮಾನ ಮಾಡುವ ನಿಮ್ಮ ನಾಟಕಕ್ಕೆ ಕ್ಷಮೆ ಇಲ್ಲ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next