Advertisement

ನಾಳೆ ಪ್ರಕಟವಾಗಲ್ಲ ಎಸ್ಎಸ್ಎಲ್ ಸಿ ಫಲಿತಾಂಶ, ದಿನಾಂಕ ಇನ್ನೂ ನಿಶ್ಚಯವಾಗಿಲ್ಲ:ಸುರೇಶ್ ಕುಮಾರ್

05:59 PM Aug 06, 2020 | keerthan |

ಬೆಂಗಳೂರು: ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದ ದಿನಾಂಕ ಇನ್ನೂ ನಿಶ್ಚಯವಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Advertisement

ನಾಳೆ ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ ಎಂಬ ಸುದ್ದಿಗಳ ಹಿನ್ನಲೆಯಲ್ಲಿ ಸಚಿವರು ಸ್ಪಷ್ಟಪಡಿಸಿದ್ದಾರೆ. ತನ್ನ ಫೇಸ್ ಬುಕ್ ಖಾತೆಯಲ್ಲಿ ಸಚಿವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆಯಬೇಕಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಕೋವಿಡ್-19 ಸೋಂಕು ಕಾರಣದಿಂದ ಮುಂದೂಡಲಾಗಿತ್ತು. ನಂತರ ಸುರಕ್ಷಿತ ಕ್ರಮಗಳೊಂದಿಗೆ ಜೂನ್ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಸಲಾಗಿತ್ತು.

ಆಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಸಚಿವರು ಈ ಹಿಂದೆ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next