Advertisement

ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುರೇಶ್ ಕುಮಾರ್

07:43 PM Jul 10, 2020 | keerthan |

ಬಂಟ್ವಾಳ: ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು.

Advertisement

ಈ ವೇಳೆ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿ ಆತನ ಜತೆ ಉಭಯ ಕುಶಲೋಪರಿ ವಿಚಾರಿಸಿದರು.

ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಯಾವ ಪರೀಕ್ಷೆ ಹೇಗಿತ್ತು ಎಂಬ ಮಾಹಿತಿ ಕೇಳಿದರು. ನಿನ್ನ ಸಾಧನೆಯ ಕುರಿತು ಅದೇ ದಿನ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದೆ ಎಂದರು. ತಮ್ಮ ಆಪ್ತ ಸಹಾಯಕನನ್ನು ಕರೆದು ಪೋಟೊ ತೆಗೆಸಿಕೊಂಡರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೊದಲಾದವರು ಜತೆಗಿದ್ದರು

Advertisement

Udayavani is now on Telegram. Click here to join our channel and stay updated with the latest news.

Next