Advertisement

ಬೆಳಾಲು ವಿದ್ಯಾರ್ಥಿನಿ ಕವನ ಸಂಕಲನಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ

09:42 PM May 23, 2020 | mahesh |

ಬೆಳ್ತಂಗಡಿ: ತಾಲೂಕಿನ ಬೆಳಾಲು, ಮಾಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿದ್ದ ವಿದ್ಯಾರ್ಥಿನಿ ರೇಷ್ಮಾ ಬರೆದ “ಗುರುಕಾಣಿಕೆ’ ಎಂಬ ಕವನ ಸಂಕಲನ ಮೆಚ್ಚಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅಭಿನಂದನ ಪತ್ರ ಬರೆದಿದ್ದಾರೆ.

Advertisement

ಪ್ರೌಢ ಶಾಲೆಯಲ್ಲಿರುವಾಗಲೇ ಮನಸ್ಸಿನಲ್ಲಿ ಮೂಡಿದ ಭಾವನೆಗಳನ್ನು ಕವನಗಳ ರೂಪದಲ್ಲಿ ವ್ಯಕ್ತಪಡಿಸಿ ಕಾವ್ಯಲೋಕಕ್ಕೆ ತನ್ನ ಕಾಣಿಕೆ ಅರ್ಪಿಸುತ್ತಿರುವುದು ಖುಷಿಯ ಸಂಗತಿಯಾಗಿದೆ. ನಾಡು, ನುಡಿ, ರಾಷ್ಟ್ರ, ಗುರುಗಳು, ತಂದೆ, ತಾಯಿ ಹಾಗೂ ಪ್ರಕೃತಿ ಪ್ರೇಮದ ಕುರಿತ ಸಾಲುಗಳು ಮೆಚ್ಚುವಂತದ್ದು. ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ ನೀನು ಎಲ್ಲರಿಗೂ ಮಾದರಿ ಎನ್ನಲು ಹೆಮ್ಮೆ ಅನಿಸುತ್ತದೆ. ಈ ಕಾವ್ಯ ಕೃಷಿಯನ್ನು ಮುಂದುವರಿಸಿ ಕನ್ನಡ ಸಾರಸ್ವತ ಲೋಕಕ್ಕೆ ಉತ್ತಮ ಕೃತಿಗಳು ಸಮರ್ಪಿತವಾಗಲಿ ಎಂದು ಶಿಕ್ಷಣ ಸಚಿವರು ಪತ್ರದಲ್ಲಿ ಹಾರೈಸಿದ್ದಾರೆ.

ಬೆಳಾಲು ಕೆರೆಕೋಡಿ ನಿವಾಸಿಯಾಗಿರು ರೇಷ್ಮಾ ಮಾಯಾ ಶಾಲೆಯಲ್ಲಿ 8ನೇ ತರಗತಿ ಪೂರ್ಣಗೊಳಿಸಿ ಪ್ರಸಕ್ತ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಕಲಿಕೆಯಲ್ಲೂ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದು, ಪ್ರಬಂಧ, ಕವನ ಸಂಗ್ರಹ ಸೇರಿದಂತೆ ಹಲವಾರು ಚಟುವಟಿಕೆಯಲ್ಲೂ ಪ್ರತಿಭಾನ್ವಿತೆಯಾಗಿದ್ದಾಳೆ.

Advertisement

Udayavani is now on Telegram. Click here to join our channel and stay updated with the latest news.

Next