Advertisement

ಶೂ ಹಾಕಿಕೊಂಡೇ ದಸರಾ ಗಜಪಡೆಗೆ ಪೂಜೆ ಸಲ್ಲಿಸಿದ ಸಚಿವ ಉಮೇಶ್ ಕತ್ತಿ!

11:05 AM Aug 07, 2022 | Team Udayavani |

ಮೈಸೂರು: ಪ್ರಸಿದ್ಧ ಮೈಸೂರು ದಸರಾದ ಆರಂಭ ಎಂಬಂತಿರುವ ಗಜ ಪಯಣ ಕಾರ್ಯಕ್ರಮಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಭಾನುವಾರ ಸಂಭ್ರಮ, ಸಾಂಪ್ರದಾಯಿಕ ಚಾಲನೆ ದೊರೆಯಿತು. ಆದರೆ ಈ ವೇಳೆ ಅರಣ್ಯ ಸಚಿವ ಉಮೇಶ್ ಕತ್ತಿ ಶೂ ಧರಿಸಿಕೊಂಡೇ ಪೂಜೆ ಸಲ್ಲಿಸಿದ ಪ್ರಸಂಗ ನಡೆಯಿತು.

Advertisement

ಶೂ ಹಾಕಿಕೊಂಡೇ ಅಂಬಾರಿ ಆನೆ ಅಭಿಮನ್ಯುಗೆ ಪೂಜೆ ಸಲ್ಲಿಸಿದ ಅವರು, ಗಜಪಡೆಗೆ ಪುಷ್ಪಾರ್ಚನೆ ಮಾಡಿ, ಕಬ್ಬು, ಕಡಬು ತಿನ್ನಿಸಿದರು.

ಸಚಿವ ಎಸ್.ಟಿ. ಸೋಮಶೇಖರ್, ಶಾಸಕ ಎಚ್.ಪಿ. ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಮಂಜೇಗೌಡ ಹಾದಿಯಾಗಿ ಎಲ್ಲರೂ ಶೂ, ಚಪ್ಪಲಿ ತೆಗೆದು ಪೂಜೆ ಸಲ್ಲಿಸಿದರು. ಆದರೆ ಅರಣ್ಯ ಸಚಿವ ಉಮೇಶ್ ಕತ್ತಿ ಮಾತ್ರ ಶೂ ಹಾಕಿಕೊಂಡು ಪೂಜೆ ಸಲ್ಲಿಸಿದರು.

ತುಂತುರು ಮಳೆಯ ನಡುವೆಯೂ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮ ಪಂಚಾಯಿತಿಯ ವೀರನಹೊಸಹಳ್ಳಿ ಬಳಿಯಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಗೇಟ್ ಬಳಿ ವಿಶೇಷವಾಗಿ ಅಲಂಕೃತಗೊಂಡು ಸಾಲಾಗಿ ನಿಂತಿದ್ದ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.  ಜಾನಪದ ಕಲಾ ತಂಡಗಳು, ಮುತ್ತೈದೆಯರು, ಹಾಡಿಯ ಜನರು ಈ ಸಾಂಪ್ರದಾಯಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ:ಮೈಸೂರು ದಸರಾ: ಮಳೆಯ ನಡುವೆಯೇ ಗಜ ಪಯಣಕ್ಕೆ ಸಂಭ್ರಮದ ಚಾಲನೆ

Advertisement

ಸಿಂಗಾರಗೊಂಡು ಸಾಲಾಗಿ ನಿಂತಿದ್ದ ಕ್ಯಾಪ್ಟನ್ ಅಭಿಮನ್ಯು, ಅರ್ಜುನ,  ಧನಂಜಯ, ಗೋಪಾಲಸ್ವಾಮಿ, ಭೀಮ, ಮಹೇಂದ್ರ, ಕಾವೇರಿ, ಚೈತ್ರಾ, ಕಾವೇರಿ ಆನೆಗಳ ಪಾದ ತೊಳೆದು ಹೂ, ಹರಿಶಿನ, ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದರು. ಆನೆಗಳಿಗೆ ಗಂಧ, ಸುಗಂಧಭರಿತ ಪಂಚಫಲ, ಕಡುಬು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ದ್ರಾಕ್ಷಿ, ಗೋಡಂಬಿ, ಕಲ್ಲು ಸಕ್ಕರೆ, ಮೋದಕ ನೈವೇದ್ಯ ನೀಡಿ, ಶೋಡಷೋಪಚಾರ ಪೂಜೆ, ಗಣಪತಿ ಅರ್ಚನೆಯೊಂದಿಗೆ ವನದೇವತೆ ಹಾಗೂ ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು. ಆನೆಗಳು ಕಾಡಿನಿಂದ ನೇರವಾಗಿ ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಆಗಮಿಸಲಿದ್ದು, ಆ.10ರಂದು ಅರಮನೆ ಪ್ರವೇಶಿಸಲಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next