Advertisement

ಆನಂದ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ : ವಿ. ಸೋಮಣ್ಣ

11:09 AM Aug 11, 2021 | Team Udayavani |

ಬೆಂಗಳೂರು : ಆನಂದ ಸಿಂಗ್ ಅವರ ಅಸಮಾಧಾನ ಎರಡು ದಿನಗಳಲ್ಲಿ ಸುಖಾಂತ್ಯವಾಗಲಿದೆ. ಆನಂದ ಸಿಂಗ್ ಬುದ್ದಿವಂತರಿದ್ದಾರೆ. ಈಗಾಗಲೇ ಸಿಎಂ ಮಾತನಾಡಿದ್ದಾರೆ. ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

Advertisement

ವಿಧಾನಸೌಧದ ಮೂರನೇ ಮಹಡಿಯ 327 ರಲ್ಲಿ ಕೊಠಡಿ ಪೂಜೆ ಸಲ್ಲಿಕೆ ಮಾಡಿ ಮಾಧ್ಯಮದವರಿಗೆ ಪ್ರತಿಕ್ರಿಯಿಸದ ಸೋಮಣ್ಣ, ಹೈಕಮಾಂಡ್ ಜೊತೆ ಚರ್ಚಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಇನ್ನೊಮ್ಮೆ ಆನಂದ ಸಿಂಗ್ ಅವರ ಜೊತೆ ಮಾತಾಡ್ತಾರೆ. ಸಿಎಂ ಬೊಮ್ಮಾಯಿ ಅವರು ಸೂಕ್ಷ್ಮವಾಗಿ ಹೆಜ್ಜೆ ಹಾಕ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಮಾರ್ಗದರ್ಶನವನ್ನೂ ತೆಗೆದುಕೊಂಡು ಮುನ್ನಡೆಯುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,353 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ

ಇನ್ನು, ಶಾಸಕ ಪ್ರಿತಮ್ ಗೌಡ್ ಗೆ ಸೂಕ್ಷ್ಮ ಮಾತುಗಳಲ್ಲೇ ತಿರುಗೇಟು ನೀಡಿದ ಸಚಿವ ಸೋಮಣ್ಣ, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಸನದಲ್ಲಿ ಚುನಾವಣೆ ಮಾಡಿದ್ದೆ. ಆಗ ಇವರೆಲ್ಲ ಏಲ್ಲಿದ್ದರೋ ಗೊತ್ತಿಲ್ಲ ಎಂದಿದ್ದಾರೆ.

ದೇವೆಗೌಡರು ಈ ರಾಜ್ಯದ ಮುತ್ಸದ್ದಿ ನಾಯಕ. ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡಬೇಕು. ಸೋಮಣ್ಣನವರ ಒಳ್ಳೆಯತನ ಪ್ರಿತಮ್ ಗೌಡ ಅವರಿಗೆ ಖಾರವಾಗಿ ಕಾಣಿಸಿರಬಹುದು

Advertisement

ಅವರಿಗೆ ಒಳ್ಳೆಯದಾಗಲಿ. ಇನ್ಮುಂದೆ ನಾನು ಎಲ್ಲರಿಗೂ ಬಹುವಚನದಲ್ಲೇ ಮಾತಾಡ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಈರುಳ್ಳಿಗೆ ಕಾಡುತ್ತಿರುವ ಕೊಳೆರೋಗದಿಂದ ಮಣ್ಣಲ್ಲಿ ಮಣ್ಣಾಗುತ್ತಿರುವ ರೈತನ ಕಣ್ಣೀರು..!

Advertisement

Udayavani is now on Telegram. Click here to join our channel and stay updated with the latest news.

Next