Advertisement

ಸಚಿವ ವೆಂಕಟರಮಣಪ್ಪಗೆ ಪತ್ನಿ ವಿಯೋಗ

06:40 AM Nov 15, 2018 | |

ಚಿತ್ರದುರ್ಗ: ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಅವರ ಪತ್ನಿ ಶಾರದಮ್ಮ (65) ಬುಧವಾರ ಮಧ್ಯಾಹ್ನ ಬೆಂಗಳೂರಿನ ಯಶವಂತಪುರದಲ್ಲಿರುವ ಕೋಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ನಿಧನರಾದರು. 

Advertisement

ಮೃತರು ಪತಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಾರದಮ್ಮ, ಕಳೆದ ಒಂದೂವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಬುಧವಾರ ಸಂಜೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿರುವ ಸ್ವಗ್ರಾಮ ಹನುಮಂತನಹಳ್ಳಿಗೆ ಪಾರ್ಥಿವ ಶರೀರವನ್ನು ತರಲಾಗುವುದು. ಗುರುವಾರ ಮಧ್ಯಾಹ್ನ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next