Advertisement

ಕುಟುಂಬ ಸಮೇತ ಅಂಜನಾದ್ರಿ ಬೆಟ್ಟದಲ್ಲಿ ದೇವರ ದರ್ಶನ ಪಡೆದ ಸಚಿವ ಯೋಗೇಶ್ಚರ್

09:05 AM Jun 30, 2021 | Team Udayavani |

ಕೊಪ್ಪಳ: ವಿಶ್ವ ಪ್ರಸಿದ್ದ ಆನೆಗೊಂದಿಯ ಅಂಜನಾದ್ರಿ ಬೆಟ್ಟಕ್ಕೆ ಇಂದು ಬೆಳ್ಳಂಬೆಳಗ್ಗೆ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಭೇಟಿ ನೀಡಿ ಆಂಜನೇಯ ದೇವರ ದರ್ಶನ ಪಡೆದರು.

Advertisement

ಉತ್ತರ ಕರ್ನಾಟಕದ ಪ್ರವಾಸ ಹಮ್ಮಿಕೊಂಡಿರುವ ಸಚಿವ ಯೋಗೇಶ್ವರ್ ಅವರು ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಕುಟುಂಬ ಸಮೇತ ಅಂಜಿನಾದ್ರಿ ಬೆಟ್ಟ ಹತ್ತಿ ಆಂಜನೇಯನಿಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದರು.

ಅಂಜನಾದ್ರಿ ಬೆಟ್ಟವನ್ನು ವಿಶ್ವ ಮಟ್ಟದಲ್ಲಿ ಪ್ರವಾಸೋದ್ಯಮವನ್ನಾಗಿ ಅಭಿವೃದ್ಧಿ ಪಡಿಸಲು ವಿಶೇಷ ಯೋಜನೆ ರೂಪಿಸಲಾಗಿದ್ದು ಇದರ ಅಭಿವೃದ್ಧಿ ಕುರಿತಂತೆ ಚರ್ಚಿಸಲು ಕೊಪ್ಪಳ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇವರೊಟ್ಟಿಗೆ ಬಿಜೆಪಿ ನಾಯಕಿ ಹಾಗೂ ಖ್ಯಾತ ನಟಿ ಶೃತಿ ಅವರು ಆಗಮಿಸಿ ಅಂಜನಾದ್ರಿ ದೇವರ ದರ್ಶನ ಪಡೆದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next