Advertisement

ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡಿದ ಸಚಿವ ಜಮೀರ್‌

11:26 PM Jun 15, 2019 | Lakshmi GovindaRaj |

ಬೆಂಗಳೂರು: ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಆಧ್ಯಕ್ಷ ದಿನೇಶ್‌ಗುಂಡೂರಾವ್‌ ಅವರು ಸಚಿವ ಜಮೀರ್‌ ಅಹಮದ್‌ ಅವರನ್ನು ಕರೆಸಿಕೊಂಡು ಮಾಹಿತಿ ಪಡೆದರು.

Advertisement

ಶನಿವಾರ ಕೆಪಿಸಿಸಿ ಕಚೇರಿಗೆ ವಿಧಾನ ಪರಿಷತ್‌ ಸದಸ್ಯರಾದ ರಿಜ್ವಾನ್‌ ಅರ್ಷದ್‌, ನಜೀರ್‌ ಅಹಮದ್‌ ಅವರೊಂದಿಗೆ ಆಗಮಿಸಿದ ಜಮೀರ್‌ ಅಹಮದ್‌, ಇಡೀ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು.

ನಮ್ಮ ಸಮುದಾಯಕ್ಕೆ ಅನ್ಯಾಯವಾದಾಗ ನ್ಯಾಯ ಕೊಡಿಸಲು ಮೊದಲು ಹೋಗಿದ್ದೇ ತಾವು. ಆದರೆ, ಬಿಜೆಪಿ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next