Advertisement

ಕಾಪು ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡಲು ಮೀನುಗಾರರ ವೇದಿಕೆ ಆಗ್ರಹ

01:05 PM Nov 20, 2020 | keerthan |

ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕೆಂದು ಮಂಗಳೂರಿನ ಮೀನುಗಾರರ ವೇದಿಕೆ ಆಗ್ರಹಿಸಿದೆ.

Advertisement

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ, ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಲಾಲಾಜಿ ಮೆಂಡನ್ ಅವರಿಗೆ ಅರ್ಹವಾಗಿ ಸಚಿವ ಸ್ಥಾನ ದೊರೆಯಲೇಬೇಕು ಎಂದರು.

ಗಂಗಾಮತ/ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು. ಈ ಹಿಂದೆಯೂ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದವರು ಹೇಳಿದರು.

ಇದನ್ನೂ ಓದಿ:ಬಸವ ಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗುವುದಿಲ್ಲ: ಬಿ.ಸಿ. ಪಾಟೀಲ

Advertisement

ಸುದ್ದಿಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next