Advertisement

ಮೀರಾರೋಡ್‌ ರಾಧಾಕೃಷ್ಣ  ನೃತ್ಯ ಅಕಾಡೆಮಿ: ನೃತ್ಯ ವೈವಿಧ್ಯ

12:36 PM Dec 03, 2018 | Team Udayavani |

ಮುಂಬಯಿ: ಮೀರಾ ರೋಡ್‌ನ‌ ರಾಧಾಕೃಷ್ಣ ನೃತ್ಯ ಅಕಾಡೆಮಿಯ ವತಿಯಿಂದ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ  ರಾಧಾಕೃಷ್ಣ ನೃತ್ಯ ಅಕಾಡೆಮಿಯ ನೃತ್ಯ ಗುರು, ವಿದುಷಿ ಸುಕನ್ಯಾ ಭಟ್‌ ಅವರ ನಿರ್ದೇಶನದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ನಡೆಯಿತು.

Advertisement

ಜ್ಞಾನಮಂದಾರ ಅಕಾಡೆಮಿ ಬೆಂಗಳೂರು ಇವರ ಸಹ ಪ್ರಾಯೋಜಕತ್ವದಲ್ಲಿ ನಡೆದ ಕನ್ನಡ ಪ್ರತಿಭೋತ್ಸವ-ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉಡುಪಿ ಪರ್ಯಾಯ ಶ್ರೀ ವಿದ್ಯಾ ಧೀಶ ಶ್ರೀಪಾದರು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಲೋಕಕ್ಕೆ ವಿಶೇಷ ಕೊಡುಗೆ ನೀಡಿದ ಹರಿಕೃಷ್ಣ  ಪುನರೂರು, ರಾಧಾಕೃಷ್ಣ ನೃತ್ಯ ಅಕಾಡೆಮಿಯ ನಿರ್ದೇಶಕಿ, ವಿದುಷಿ ಸುಕನ್ಯಾ ಭಟ್‌ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಅದಮಾರು ಮಠದ ಕಿರಿಯ ಶ್ರೀಗಳು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಾಧಾಕೃಷ್ಣ ನೃತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ನೃತ್ಯ ವೈವಿಧ್ಯ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next