Advertisement

ಹೊನವಾಡ ಶಿಕಣ ಸಂಸ್ಥೆ ಅಧ್ಯಕ್ಷಕನ ಅನುಚಿತ ವರ್ತನೆ

05:01 PM Jan 02, 2022 | Shwetha M |

ವಿಜಯಪುರ: ಹೊನವಾಡ ಶಾಲೆ ಸಂಸ್ಥೆಯ ಅಧ್ಯಕ್ಷನ ಅನುಚಿತ ವರ್ತನೆ ಖಂಡಿಸಿ ಹಾಗೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ವಿಜಯಪುರ-ಅಥಣಿ ಹೆದ್ದಾರಿ ಸಂಚಾರ ತಡೆದು ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಖಾಸಗಿ ಶಿಕ್ಷಣ ಸಂಸ್ಥೆ ಬಸವಂತರಾಯ ಪದವಿ ಪೂರ್ವ ಅನುದಾನಿತ ಕಾಲೇಜಿನ ಅಧ್ಯಕ್ಷ ನಳಿನಿಕಾಂತ ಸಾವಂತ ವಿರುದ್ಧ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಸಂಸ್ಥೆಯ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ, ಕೂಡಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಶಾಲೆಯಲ್ಲಿ ಸರಿಯಾಗಿ ಊಟದ ವ್ಯವಸ್ಥೆ ಮಾಡುತ್ತಿಲ್ಲ. ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಹೀಗಾಗಿ ಕೂಡಲೇ ಸಾವಂತ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಪಟ್ಟು ಹಿಡಿದು ವಿಜಯಪುರ-ಅಥಣಿ ರಾಜ್ಯ ಹೆದ್ದಾರಿ ಬಂದ್‌ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರಸ್ತೆ ಮೇಲೆ ಕಲ್ಲು-ಕಟ್ಟಿಗೆ ಹಾಕಿ ಹೆದ್ದಾರಿ ಸಂಚಾರ ಬಂದ್‌ ಮಾಡಿದ್ದರಿಂದ ಈ ಮಾರ್ಗದ ಸಂಚಾರದಲ್ಲಿ ಸಂಚಾರಕ್ಕೆ ಸಮಸ್ಯೆಯಾಗಿ ಪ್ರಯಾಣಿಕರು ಪರದಾಡುವಂತೆ ಮಾಡಿತ್ತು. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ತಿಕೋಟ ಎಸೈ ಅನಿತಾ ರಾಠೊಡ, ಪ್ರತಿಭಟನಾ ನಿರತ ಮಕ್ಕಳ ಮನವೊಲಿಸಿ, ಪ್ರತಿಭಟನೆ ಹಿಂಪಡೆಯುವಂತೆ ಮಾಡಿದರು.

Advertisement

ಬಳಿಕ ರಸ್ತೆ ಸಂಚಾರ ಸುಗಮಗೊಳಿಸಿದರು. ರಸ್ತೆ ಸಂಚಾರ ಸ್ಥಗಿತ ಹೋರಾಟ ಹಿಂಪಡೆದರೂ ಪ್ರತಿಭಟನೆ ಮುಂದುವರಿ ಸಿದ ಮಕ್ಕಳು, ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೋರಾಟ ಮುಂದುವರಿಸಿದರು.

ಪ್ರೌಢ ಶಾಲಾ ಮಕ್ಕಳಿಗೆ ಮತ್ತು ಸಹ ಶಿಕ್ಷಕರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಾರೆ. ಬಿಸಿ ಊಟದ ಸಮರ್ಪಕ ಪೂರೈಕೆ ಇಲ್ಲ, ಇದ್ದಾಗ ಶುಚಿತ್ವ ಹಾಗೂ ಸ್ವಾದಿಷ್ಟ ಆಹಾರ ನೀಡುತ್ತಿಲ್ಲ. ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಇಲ್ಲ. ಸಮಸ್ಯೆ ನಿವೇದಿಸಿ, ಸೌಲಭ್ಯಕ್ಕೆ ಮನವಿ ಮಾಡಿದರೆ ವಿದ್ಯಾರ್ಥಿಗಳನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ ಎಂದು ಆರೋಪಿಸಿದರು.

ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಸಾವಂತ ಕೂಡಲೇ ರಾಜೀನಾಮೆ ನೀಡುವಂತೆ ಪಟ್ಟು ಬಿಡದ ವಿದ್ಯಾರ್ಥಿಗಳ ಬೇಡಿಕೆಗೆ ಗ್ರಾಮಸ್ಥರು ಬಂಬಲಕ್ಕೆ ನಿಂತರು. ಇದರಿಂದ ಸ್ಥಳದಲ್ಲಿ ಕೆಲಕಲಾ ಪರಿಸ್ಥಿತಿ ವಿಕೋಪಕ್ಕೆ ಏರಿತು. ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪ್ರತಿಭಟನಾ ನಿರತ ಮಕ್ಕಳ ಮನವೊಲಿಸಲು ಪ್ರಯತ್ನ ನಡೆಸಿದರು.

ವಿಜಯಪುರ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್‌. ಹತ್ತಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್‌.ಡಿ. ಮೊಸಲಗಿ, ತಾಪಂ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಂಜೀವ ಹುಲ್ಲೋಳ್ಳಿ, ಶಿಕ್ಷಣ ಸಂಯೋಜಕರು, ಪಿಡಿಒ ಬಿ.ಪಿ. ಉಪ್ಪಲದ್ದಿನ್ನಿ, ಪೊಲೀಸ್‌ ಇಲಾಖೆಯವರು ಸೇರಿ ಪರಿಸ್ಥಿತಿ ನಿಭಾಯಿಸಲು ಹೆಣಗುವಂತಾಯಿತು.

Advertisement

Udayavani is now on Telegram. Click here to join our channel and stay updated with the latest news.

Next