Advertisement

Sullia ಬಸ್ಸಿನಲ್ಲಿ ಅನುಚಿತ ವರ್ತನೆ; ಹಲ್ಲೆ: ಇಬ್ಬರ ಬಂಧನ

11:23 PM Sep 23, 2024 | Team Udayavani |

ಸುಳ್ಯ: ಬಸ್ಸಿನಲ್ಲಿ ಯುವತಿಯೊಂದಿಗೆ ಯುವಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದ್ದು, ಯುವಕನಿಗೆ ಸುಳ್ಯದಲ್ಲಿ ತಂಡವೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

Advertisement

ಕಾಸರಗೋಡಿನ ಅಬ್ದುಲ್‌ ನಿಯಾಝ್ (22) ಆರೋಪಿ. ಬೆಂಗಳೂರಿನಿಂದ ಸುಬ್ರಹ್ಮಣ್ಯ ಮೂಲಕ ಸುಳ್ಯಕ್ಕೆ ಬರುವ ಬಸ್ಸಿಗೆ ಸುಳ್ಯದಲ್ಲಿ ಕಲಿಯುತ್ತಿರುವ ಸಕಲೇಶಪುರದ ವಿದ್ಯಾರ್ಥಿನಿ ಸೋಮವಾರ ಪ್ರಯಾಣಿಸುತ್ತಿದ್ದು, ಈ ವೇಳೆ ಯುವಕ ಮೈಮುಟ್ಟಿ ಆಕೆಯೊಡನೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಸುಳ್ಯದ ಪೈಚಾರ್‌ನಲ್ಲಿ ಇಳಿದ ಆರೋಪಿಯನ್ನು ಯುವಕರು ಹಿಡಿದು ಸುಳ್ಯದ ಬಸ್‌ ನಿಲ್ದಾಣ ಸಮೀಪ ಕರೆತಂದು ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಯುವಕ ಮುಳ್ಳೇರಿಯಾ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.

ಎರಡು ಪ್ರಕರಣ ದಾಖಲು: ಬಸ್ಸಿನಲ್ಲಿ ಅನುಚಿತವಾಗಿ ವರ್ತಿಸಿದ್ದ ಅಬ್ದುಲ್‌ ನಿಯಾಝ್ ವಿರುದ್ಧ ಯುವತಿ ನೀಡಿದ ದೂರಿನಂತೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಮೇಲೆ ತಂಡದಿಂದ ಹಲ್ಲೆ, ಕೊಲೆ ಯತ್ನ ನಡೆಸಲಾಗಿದೆ ಎಂದು ಆರೋಪಿತ ಯುವಕ ಅಬ್ದುಲ್‌ ನಿಯಾಝ್ ಸುಳ್ಯ ಠಾಣೆಗೆ ದೂರು ನೀಡಿದ್ದು, ಈ ಪ್ರಕರಣವೂ ದಾಖಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವರ್ಷಿತ್‌ ಚೊಕ್ಕಾಡಿ ಹಾಗೂ ಮಿಥುನ್‌ ಸುಳ್ಯನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next