Advertisement

ಕೋಲಾರ:ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ  ಹಚ್ಚಿದ ದುಷ್ಕರ್ಮಿಗಳು 

09:27 AM Apr 24, 2018 | Team Udayavani |

ಕೋಲಾರ : ಚುನಾವಣೆ ವೇಳೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಕೋಲಾರದ ಬಿಜೆಪಿ ಅಭ್ಯರ್ಥಿ ಓಂ ಶಕ್ತಿ ಛಲಪತಿ ಅವರ ಕಾರಿಗೆ ಬೆಂಕಿ ಹಚ್ಚಲಾಗಿದೆ. 

Advertisement

ಮಂಗಳವಾರ ನಸುಕಿನ 3 ಗಂಟೆಯ ವೇಳೆಗೆ ಛಲಪತಿ ಅವರ ಇನ್ನೋವಾ  ಕಾರಿಗೆ ಬೆಂಕಿ ಹಚ್ಚಲಾಗಿದ್ದು ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಪಕ್ಕದಲ್ಲಿದ್ದ ಇನ್ನೊಂದು ಕಾರು ಬೆಂಕಿಗೆ ಆಹುತಿಯಾಗಿದೆ. 

ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. 

ಕೋಲಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next