Advertisement

ತಪ್ಪಿದ Congress ticket; ರಘು ಆಚಾರ್ JDS ಸೇರ್ಪಡೆಗೆ ಮುಹೂರ್ತ ಫಿಕ್ಸ್

04:30 PM Apr 07, 2023 | Team Udayavani |

ಚಿತ್ರದುರ್ಗ:ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ.

Advertisement

ರಘು ಆಚಾರ್ ಅವರ ಚಿತ್ರದುರ್ಗದ ನಿವಾಸಕ್ಕೆ ಭೇಟಿ‌ ನೀಡಿ ವಿಧಾನ ಪರಿಷತ್ ಸದಸ್ಯ ಶರವಣ ಅವರು ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ತೆ ಚರ್ಚೆ ಬಳಿಕ ಮಾತನಾಡಿದ ಶರವಣ, ಎಪ್ರಿಲ್ 14ಕ್ಕೆ ರಘು ಆಚಾರ್ ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆ ಆಗಲಿದ್ದಾರೆ. ಬೇಷರತ್ತಾಗಿ ಸೇರ್ಪಡೆಗೆ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ರಘು ಆಚಾರ್ ಅವರ ಬೆನ್ನಿಗೆ ಚೂರಿ ಹಾಕಿದೆ.ಅವರು ಆಸೆ ಪಟ್ಟಂತೆ ಜೆಡಿಎಸ್ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಕ್ಷೇತ್ರದ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ.

ರಘು ಆಚಾರ್ ಮಾತನಾಡಿ ಎಪ್ರಿಲ್‌ 14 ರಂದು ಮಧಾಹ್ನ 12.07ಕ್ಕೆ ಜೆಡಿಎಸ್ ಸೇರ್ಪಡೆಯಾಗುತ್ತೇನೆ. ಚಿತ್ರದುರ್ಗದಲ್ಲಿ ಆರು ಕ್ಷೇತ್ರದಲ್ಲಿ‌ ಜೆಡಿಎಸ್ ಗೆಲ್ಲಲಿದೆ. ಆರಕ್ಕೆ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ಉತ್ತರ ನೀಡುತ್ತೇನೆ. ಜೆಡಿಎಸ್ ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡುವ ಬಗ್ಗೆ ತೀರ್ಮಾನಿಸುತ್ತಾರೆ. ಚಿತ್ರದುರ್ಗದಿಂದ ಸ್ಪರ್ಧೆಗೆ ಸೂಚಿಸಿದರೆ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಜೆಡಿಎಸ್ ಗೆಲ್ಲಿಸಿಕೊಂಡು ಬರುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next