Advertisement

Mangaluru: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಅನ್ಯ ಧರ್ಮದ ಯುವಕನ ಜತೆ ವಿವಾಹ

07:07 PM Aug 10, 2024 | Team Udayavani |

ಮಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳು ಕೇರಳದಲ್ಲಿ ಅನ್ಯ ಧರ್ಮದ ಯುವಕನೊಂದಿಗೆ ವಿವಾಹವಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.

Advertisement

ಮಂಗಳೂರಿನ ವಿಸ್ಮಯ ಎನ್ನುವ ವಿದ್ಯಾರ್ಥಿನಿ ಕೇರಳದ ಅಶ್ಪಕ್‌ ಎನ್ನುವ ಯುವಕನ ಜತೆ ಮದುವೆಯಾಗಿದ್ದಾಳೆ. ಈ ಪ್ರಸಂಗ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದು, ವಿವಾಹಕ್ಕೆ ಕೋರ್ಟ್‌ ಅನುಮತಿ ನೀಡಿದೆ.

ಘಟನೆ ಏನು?: ವಿದ್ಯಾರ್ಥಿನಿ ವಿಸ್ಮಯಳನ್ನು ಜೂ.30ರಂದು ಉಳ್ಳಾಲದಿಂದ ಕಾಸರಗೋಡು ವಿದ್ಯಾನಗರ ನಿವಾಸಿ ಮುಹಮ್ಮದ್‌ ಅಶ್ಫಕ್ ಅಪಹರಿಸಿದ್ದ ಬಗ್ಗೆ ವಿದ್ಯಾರ್ಥಿನಿಯ ತಂದೆ ವಿನೋದ್‌ ಅವರು ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ‌ಮಗಳನ್ನು ಮತಾಂತರಗೊಳಿಸುವುದಕ್ಕಾಗಿ ಅಶ್ಪಕ್‌ ಮತ್ತು ಆತನ ತಂಡ ಅಪಹರಣ ನಡೆಸಿದೆ ಎಂದು ದೂರಿನಲ್ಲಿ ಹೇಳಿದ್ದರು.

ಅಶ್ಫಕ್ ಈಗಾಗಲೇ ಒಂದು ವಿವಾಹವಾಗಿದ್ದು ಈತನ ಮೇಲೆ 15ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದರು.

ಘಟನೆ ನೆನೆದು ವಿಸ್ಮಯ ತಂದೆ ಮಾಧ್ಯಮ, ವಿಶ್ವ ಹಿಂದೂ ಪರಿಷತ್‌ ಪದಾಧಿಕಾರಿಗಳ ಎದುರು ಕಣ್ಣೀರು ಹಾಕಿ ಮಗಳನ್ನು ರಕ್ಷಿಸುವಂತೆ ಮನವಿ ಮಾಡಿದ್ದರು.

Advertisement

ಇದು ಮತ್ತೊಂದು ಲವ್‌ ಜೆಹಾದ್‌ ಪ್ರಕರಣವಾಗಿದ್ದು ತನಿಖೆ ನಡೆಸಬೇಕೆಂದು ವಿಎಚ್‌ಪಿ ಆಗ್ರಹಿಸಿತ್ತು.

ಬಳಿಕ ಈಕೆಯನ್ನು ಪೊಲೀಸರು ಪತ್ತೆ ಹಚ್ಚಿ ಸಲಹಾ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ ಆಕೆಯನ್ನು ಅಶ್ಫಕ್ ಕೇರಳಕ್ಕೆ ಕರೆದೊಯ್ದು ವಿವಾಹವಾಗಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next