Advertisement

ಬಿಎಸ್‌ವೈ ಸಿಎಂ ಮಾಡಲು ಮಿಷನ್‌ 150 ಸಾಧನೆ

07:10 AM Jul 25, 2017 | |

ಗಂಗಾವತಿ/ಮಸ್ಕಿ: ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದು ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು 150 ಶಾಸಕರ ಗೆಲುವಿಗೆ ಶ್ರಮಿಸುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವೂ ಸೇರಿ ಕುಟುಂಬದ ಯಾರೂ ಚುನಾವಣೆಯಲ್ಲಿ ಸ್ಪ ರ್ಧಿಸುವುದಿಲ್ಲ.
ಬದಲಿಗೆ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ಹಾಗೂ ಎಲ್ಲ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು. ಜನವಿರೋಧಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪಕ್ಷ ಸಂಘಟಿಸಲು ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು.

ಸಂಘಟನಾತ್ಮಕವಾಗಿ ತಾವು ಪಕ್ಷದ ವತಿಯಿಂದ ಯಾವ ಜಿಲ್ಲೆಯನ್ನೂ ಉಸ್ತುವಾರಿ ಪಡೆದಿಲ್ಲವಾದರೂ ಪಕ್ಷದ ನಿರ್ದೇಶನದಂತೆ ಎಲ್ಲಾ ಜಿಲ್ಲೆಗಳಲ್ಲಿ ಪ್ರಚಾರ ನಡೆಸಲಾಗುವುದು. ಕೇಂದ್ರದ ಮೋದಿ ಸರ್ಕಾರ ಪ್ರಗತಿ, ರಾಜ್ಯ ಸರ್ಕಾರ ಜನವಿರೋಧಿ ನೀತಿ ಬಿಜೆಪಿಗೆ ಪ್ಲಸ್‌ ಆಗಲಿದೆ ಎಂದರು

Advertisement

Udayavani is now on Telegram. Click here to join our channel and stay updated with the latest news.

Next