Advertisement

ಸಂತ್ರಸ್ಥರ ಹೆಸರಲ್ಲಿ ವಸೂಲಿ ಮಾಡುವ ಕೆಲಸ ನಡೆಯುತ್ತಿದೆ: ಡಿ.ಕೆ‌.ಶಿವಕುಮಾರ್

10:04 AM Aug 13, 2019 | keerthan |

ಹುಬ್ಬಳ್ಳಿ: ರಾಜ್ಯದಲ್ಲಿ ಪ್ರವಾಹದಿಂದ ಉಂಟಾದ ನಷ್ಟಕ್ಕೆ ಸಂತ್ರಸ್ಥರಿಗೆ ನೆರವು ನೀಡಲು ಹಲವೆಡೆ ದೇಣಿಗೆ ಸಂಗ್ರಹ ಆರಂಭವಾಗಿದೆ. ಆದರೆ ಕೆಲವರು ಸಂತ್ರಸ್ತರಿಗೆ ನೆರವು ನೀಡುವ ಹೆಸರಲ್ಲಿ ಡಬ್ಬಿ ಹಿಡಿದು ಹೊರಟಿದ್ದಾರೆ. ಸಂತ್ರಸ್ಥರ ಹೆಸರಲ್ಲಿ ವಸೂಲಿ ಮಾಡುವ ಕೆಲಸ ಕೆಲವೆಡೆ ನಡೆಯುತ್ತಿದೆ.
ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ಹರಿಸಬೇಕು ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಸರ್ಕಾರ ಕೈಗೊಂಡ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ಇದರಲ್ಲಿ ಪಕ್ಷ ರಾಜಕೀಯ ಮಾಡುವುದಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರಿಗೂ ಸಹಾಯ ಹಸ್ತ ಚಾಚುವಂತೆ ಹೇಳಿದ್ದೇನೆ ಎಂದರು.

ಕುಂದಗೋಳ, ಹುಬ್ಬಳ್ಳಿ, ಬೈಲಹೊಂಗಲ, ಸೇರಿದಂತೆ ಇತರ ನೆರೆಪೀಡಿತ ಪ್ರದೇಶದಲ್ಲಿ ಇಂದು ಡಿ.ಕೆ. ಶಿವಕುಮಾರ್‌ ಪ್ರವಾಸ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next