Advertisement

Lockdown:ಮುಂಬೈನಲ್ಲಿ ತಂದೆ ನಿಧನ,ಬೆಂಗಳೂರಲ್ಲಿ ಸಿಕ್ಕಿಹಾಕಿಕೊಂಡ ಪುತ್ರ ಮಿಥುನ್ ಚಕ್ರವರ್ತಿ

08:10 AM Apr 23, 2020 | Nagendra Trasi |

ಮುಂಬೈ/ಬೆಂಗಳೂರು: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ತಂದೆ ಬಸಂತ್ ಕುಮಾರ್ ಚಕ್ರವರ್ತಿ(95ವರ್ಷ) ತೀವ್ರ ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಏತನ್ಮಧ್ಯೆ ಪುತ್ರ, ನಟ ಮಿಥುನ್ ಚಕ್ರವರ್ತಿ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ಸಿಕ್ಕಿಹಾಕಿಕೊಂಡಿರುವುದಾಗಿ ವರದಿ ತಿಳಿಸಿದೆ.

Advertisement

ಸಿನಿಮಾ ಚಿತ್ರೀಕರಣದ ಹಿನ್ನೆಲೆಯಲ್ಲಿ ಮಿಥುನ್ ಚಕ್ರವರ್ತಿ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರಿಂದ ಮಿಥುನ್ ಚಕ್ರವರ್ತಿ ಬೆಂಗಳೂರಿನಲ್ಲಿಯೇ ಉಳಿಯುವಂತಾಗಿತ್ತು. ಇದೀಗ ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಲು ಮುಂಬೈಗೆ ತೆರಳಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಜನಪ್ರಿಯ ಬೆಂಗಾಲಿ ನಟಿ ರಿತುಪರ್ಣಾ ಸೇನ್ ಗುಪ್ತಾ ಅವರು ಮಿಥುನ್ ಚಕ್ರವರ್ತಿ ತಂದೆಯ ನಿಧನ ವಾರ್ತೆಯನ್ನು ಟ್ವೀಟರ್ ನಲ್ಲಿ ಶೇರ್ ಮಾಡಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಬಸಂತ್ ಕುಮಾರ್ ಅವರು ಪತ್ನಿ ಸಾಂಟಿಮೋಯೀ ಹಾಗೂ ಹಿರಿಯ ಪುತ್ರ ಮಿಥುನ್ ಚಕ್ರವರ್ತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಮಿಥುನ್ ಚಕ್ರವರ್ತಿ ಹಿರಿಯ ಪುತ್ರ ಮಿಮೋಹ್ ಚಕ್ರವರ್ತಿ ಮುಂಬೈನಲ್ಲಿಯೇ ಇದ್ದಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next