Advertisement

ಭಾರತ ಬಂದ್‌ಗೆ  ಮಿಶ್ರ ಪ್ರತಿಕ್ರಿಯೆ;ಬಸ್‌ಗಳಿಲ್ಲದೆ ಪರದಾಟ 

04:18 AM Jan 08, 2019 | |

ಬೆಂಗಳೂರು: ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ಹಲವು ನೀತಿ ಖಂಡಿಸಿ ಕರೆ ನೀಡಿರುವ ಭಾರತ ಬಂದ್‌ಗೆ  ಕರ್ನಾಟಕ ಸಹಿತ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 

Advertisement

ಬೆಂಗಳೂರಿನಲ್ಲಿ, ಮೆಜೆಸ್ಟಿಕ್‌‌ನಲ್ಲಿ ಎಂದಿನಂತೆ ಬಿಎಂಟಿಸಿ ಬಸ್‌ಗಳ ಸಂಚಾರ ವಿರಳವಾಗಿದ್ದು, ನಿಲ್ದಾಣ ಖಾಲಿ ಖಾಲಿಯಾಗಿದೆ. ಯಶವಂತಪುರದ ಎಪಿಎಂಸಿ ಮಾರ್ಕೆಟ್‌  ಖಾಲಿಯಾಗಿರುವುದು ಕಂಡು ಬಂದಿದೆ. 

ರಾಜ್ಯಾಧ್ಯಂತ ಕೆಎಸ್‌ಆರ್‌ಟಿಸಿ ಬಸ್‌ಗಳ ಸೇವೆಯಲ್ಲಿ ವ್ಯತ್ಯವಾಗಿದೆ. ಕೆಲವು ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ಕೆಲವೆಡೆ ಪ್ರಯಾಣಿಕರು ಸಂಚಾರ ಸಾಧ್ಯವಾಗದೆ ಪರದಾಡಿದ್ದಾರೆ. ಕೆಲವು ಆಟೋ,ಟ್ಯಾಕ್ಸಿಗಳು ಪ್ರಯಾಣಿಕರಿಂದ ದುಪ್ಪಟ್ಟು ಹಣ ಪಡೆದಿರುವ ಬಗ್ಗೆ ವರದಿಯಾಗಿದೆ.

Advertisement

ಕೆಲವೆಡೆ ರಸ್ತೆ ಮಧ್ಯೆ ಟಯರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ರಾಜ್ಯಾಧ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಇದುವರೆಗೆ  ಶಾಂತಿಯುತ ಪ್ರತಿಭಟನೆಗಳು ನಡೆದಿವೆ. 

ಇಂದು ಮತ್ತು ನಾಳೆ  ವಿವಿಧ ಕಾರ್ಮಿಕ ಸಂಘಟನೆಗಳಿಂದ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮುಷ್ಕರ ನಡೆಸುತ್ತಿವೆ. ಬ್ಯಾಂಕ್‌ ನೌಕರರು ಮತ್ತು ಅಂಚೆ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next