Advertisement

ಫರ್ನೇಸ್ ಆಯಿಲ್ ಮಿಕ್ಸಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ : ನಾಲ್ವರು ವಶಕ್ಕೆ

12:21 PM Jun 30, 2021 | Team Udayavani |

ಕಡಬ : ಅಕ್ರಮವಾಗಿ ಟ್ಯಾಂಕರ್ ಗಳಿಂದ ಫರ್ನೇಸ್ ಆಯಿಲ್ ಗಳನ್ನು ಕಳ್ಳತನ ಮಾಡಿ ದಾಸ್ತಾನು ಮಾಡುತ್ತಿದ್ದ ಆರೋಪದ ಮೇಲೆ  ನಾಲ್ವರನ್ನು ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.

Advertisement

ಫರ್ನೇಸ್ ಆಯಿಲ್ ಗಳನ್ನು ಕಳ್ಳತನ ಮಾಡಿ ದಾಸ್ತಾನು ಮಾಡಿರುವುದಾಗಿ ಬಂದ ಖಚಿತ ಮಾಹಿತಿ ಪಡೆದ ಪುತ್ತೂರು ನಗರ ಠಾಣಾ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸರು ಕಡಬ ತಹಶೀಲ್ದಾರ್ ಮತ್ತು ನೆಲ್ಯಾಡಿ ಗಣಿ ಭೂ ವಿಜ್ಞಾನ ಇಲಾಖೆಯ ಭೂ ವಿಜ್ಞಾನಿ ಇವರನ್ನೊಳಗೊಂಡ ತಂಡ ದಾಳಿ ನಡೆಸಿದ್ದಾರೆ.

ವೇಳೆ ಎರಡೂ ಟ್ಯಾಂಕರ್ ಗಳು ನಿಂತುಕೊಂಡಿದ್ದು , ಜೊತೆಗೆ 4 ಜನರು ಟ್ಯಾಂಕರ್ ನಿಂದ ಪಂಪು ಮೂಲಕ ಟ್ಯಾಂಕರ್ ಗೆ ಮತ್ತು ನೆಲ ಟ್ಯಾಂಕ್ ಗಳಿಂದ ಪಂಪು ಮೂಲಕ ಟ್ಯಾಂಕರ್ ಗೆ ಫರ್ನೇಸ್ ಆಯಿಲನ್ನು ಲೋಡ್ ಅನ್ ಲೋಡ್ ಮಾಡುತ್ತಿದ್ದು, ಪೊಲೀಸರನ್ನು ಕಂಡು ಪರಾರಿಯಾಗಲೆತ್ನಿಸಿದ್ದಾರೆ.

ತಕ್ಷಣ ಪೊಲೀಸರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು, ರಘುನಾಥನ್,  ಮುತ್ತು ಪಾಂಡಿ , ಜಿ ದಾಸ್ (37), ಸಿಂಗರಾಜ್ (42)  , ಎಸ್ ಕಾರ್ತಿ (27) , ಸೆಲ್ವರಾಜ್ (60) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ವಿದ್ಯಾರ್ಥಿನಿ ದೀಕ್ಷಾಳ ಮನೆಗೆ ಶಾಸಕ, ಬಿಇಓ ಭೇಟಿ: ಹೊಸ ಮನೆ ನಿರ್ಮಾಣದ ಭರವಸೆ

Advertisement

ಮಂಗಳೂರು- ಬೆಂಗಳೂರು ಮಾರ್ಗವಾಗಿ ಸಾಗುವ ಕೆಲವು ಫರ್ನೆಸ್ ಆಯಿಲ್ ಟ್ಯಾಂಕರ್ ಗಳ ಚಾಲಕರೊಂದಿಗೆ ಹಣಕ್ಕಾಗಿ ಒಪ್ಪಂದ ಮಾಡಿಕೊಂಡು ಟ್ಯಾಂಕರ್ ಗಳನ್ನು ತಮ್ಮ ಸ್ವ ಸ್ಥಳಕ್ಕೆ ಕರೆಯಿಸಿಕೊಂಡು ಅವುಗಳಿಂದ ಸುಮಾರು 50 ರಿಂದ 200 ಲೀಟರ್ ವರೆಗೆ ಆಯಿಲನ್ನು ಕಳ್ಳತನ ಮಾಡಿ ಅವರ ಸ್ಥಳದಲ್ಲಿರುವ ಭೂಗತ ಟ್ಯಾಂಕ್ ಗಳಲ್ಲಿ ಸಂಗ್ರಹಿಸಿ ಹೆಚ್ಚು ಸಂಗ್ರಹಣೆ ಆದ ನಂತರ ಮಾಲಿಕರ ಖಾಲಿ ಟ್ಯಾಂಕರ್ ಗಳಲ್ಲಿ ತುಂಬಿಸಿ ಇತರೇ ಸ್ಥಳಗಳಿಗೆ ಸೂಕ್ತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುವುದು ತಿಳಿದುಬಂದಿದೆ.

ಮಂಗಳೂರು- ಬೆಂಗಳೂರು ಮಾರ್ಗವಾಗಿ ಸಾಗುವ ಫರ್ನೆಸ್ ಆಯಿಲ್ ಟ್ಯಾಂಕರ್ ಗಳ ಚಾಲಕರಿಗೆ ಹಣವನ್ನು ನೀಡಿ ಮಾಲೀಕರ ಗಮನಕ್ಕೆ ತರದೇ ಮಾಲಿಕರಿಗೆ ವಂಚಿಸಿ ನಷ್ಟವನ್ನುಂಟು ಮಾಡಿರುವುದಲ್ಲದೇ, ಕಳ್ಳತನ ಮಾಡಿ ಸಂಗ್ರಹಿಸಿಟ್ಟು ಫರ್ನೇಸ್ ಆಯಿಲನ್ನು ಟ್ಯಾಂಕರ್ ಮೂಲಕ ಚೆನ್ನೈ ಕಡೆಗೆ ಸಾಗಾಟ ಮಾಡುವುದಾಗಿ ಇದನ್ನು ಮುತ್ತು ಪಾಂಡಿ ಮತ್ತು ರಘನಾಥನ್ ಎಂಬಿಬ್ಬರು ನಡೆಸಿರುವುದಾಗಿ ತಿಳಿಸಿದ್ದಾರೆ.

ಬಂಧಿತರಿಂದ ರೂ. 35.21 ಲಕ್ಷ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next