Advertisement

ಮಿಯ್ನಾರು: ಕಾರು ಢಿಕ್ಕಿ ಹೊಡೆದು ಬೈಕ್‌ ಸವಾರ ಸಾವು

02:36 AM Jun 13, 2019 | mahesh |

ಕಾರ್ಕಳ: ಕಾರ್ಕಳ – ಬಜಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ, ಎಲ್ಲೂರು ಬೆಳ್ಳಿಬೆಟ್ಟು ನಿವಾಸಿ ರಾಕೇಶ್‌ ದೇವಾಡಿಗ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯ್ನಾರು ಗ್ರಾಮದ ಕರಿಯಕಲ್ಲು ಎಂಬಲ್ಲಿ ಜೂ. 12ರ ಮಧ್ಯಾಹ್ನ ಸಂಭವಿಸಿದೆ.

Advertisement

ಟಿಪ್ಪರ್‌ ಚಾಲಕರಾಗಿದ್ದ ರಾಕೇಶ್‌ ದೇವಾಡಿಗ ಮತ್ತು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸ್‌ ಸಿಬಂದಿ ಪರಶುರಾಮ ಅವರು ಬಜಗೋಳಿಯಿಂದ ಕಾರ್ಕಳ ಕಡೆಗೆ ಬೈಕಿನಲ್ಲಿ ಸಾಗುತ್ತಿದ್ದಾಗ ಕಾರ್ಕಳ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಬಂದ ಕಾರು ಢಿಕ್ಕಿ ಹೊಡೆದಿದೆ. ಸಹಸವಾರ ಪರಶುರಾಮ ಅವರನ್ನು ಮಣಿ ಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಸಿರಿಕುಮಾರ ಭಜನ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದ ರಾಕೇಶ್‌ ಸ್ನೇಹಜೀವಿಯಾಗಿದ್ದರು. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next