Advertisement

ಪರಿಷತ್ ಜಯ ಕಾಂಗ್ರೆಸ್ ಒಗ್ಗಟ್ಟಿಗೆ ಸಾಕ್ಷಿ: ಶಾಸಕ ಅಮರೇಗೌಡ ಪಾಟೀಲ

07:28 PM Dec 14, 2021 | Team Udayavani |

ಕುಷ್ಟಗಿ: ರಾಜ್ಯದಲ್ಲಿ ವಿಧಾನ ಪರಿಷತ್ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ ಶಕ್ತಿಯಿಂದ ಕಾಂಗ್ರೆಸ್ 11ರಲ್ಲಿ ಜಯ ಸಾಧಿಸಿದೆ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಈ ಚುನಾವಣೆ ಮುಂದಿನ 2023ರ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ ಕುಷ್ಟಗಿ ವಿಧಾನಸಭೆ ಕ್ಷೇತ್ರದ ಚುನಾವಣೆಗೆ ಸ್ಪಷ್ಟ ದಿಕ್ಸೂಚಿಯಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನಸೇವೆಯಲ್ಲಿ ನಿರತವಾಗಲಿದೆ ಎಂದರು.

ರಾಯಚೂರು-ಕೊಪ್ಪಳ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣಗೌಡ ಪಾಟೀಲ ಬಯ್ಯಾಪೂರ 1ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸುವ ವಿಶ್ವಾಸವಿತ್ತು.ಆದರೆ 423 ಮತಗಳ ಅಂತರದಲ್ಲಿ ಜಯ ಸಿಕ್ಕಿರುವ ಬಗ್ಗೆ ಪಕ್ಷದ ಅಂತರ್ಯದಲ್ಲಿ ಚರ್ಚಿಸಿ ಆತ್ಮಾವಲೋಕನ ಮಾಡಿಕೊಳ್ಳಲಾಗುವುದು ಎಂದರು.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪೂರ ಅವರನ್ನು ವಿಶ್ವಾಸದಿಂದ ಗೆಲ್ಲಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next