Advertisement

MLA Araga Gyanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ

03:12 PM Oct 23, 2024 | Poornashri K |

ತೀರ್ಥಹಳ್ಳಿ: ಸಿ ಪಿ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಕಾಂಗ್ರೆಸ್ ಸಂಭ್ರಮಿಸುತ್ತಿದೆ. ನಿಜವಾದ ಸಂಗತಿ ಏನೆಂದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

Advertisement

ಬುಧವಾರ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಒಂದು ಕಾಲು ಶತಮಾನ ಇರುವ ಪಕ್ಷಕ್ಕೆ ಚನ್ನಪಟ್ಟಣ ಉಪಚುನಾವಣೆಗೆ ನಿಲ್ಲಿಸಲು ಒಬ್ಬ ಅಭ್ಯರ್ಥಿ ಇಲ್ಲವಾಗಿದೆ. ಬೇರೆ ಪಕ್ಷದಿಂದ ತಂದು ಚುನಾವಣೆಗೆ ನಿಲ್ಲಿಸುವ ದುರ್ಗತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ.

ನಿಜವಾಗಲೂ ಕಾಂಗ್ರೆಸ್ ಪಕ್ಷಕ್ಕೆ ಇದು ಅವಮಾನ. ಇತ್ತೀಚಿಗೆ ಬಿಜೆಪಿ ಜೆಡಿಎಸ್ ಅನ್ನು ಎದುರಿಸಲು ಶಕ್ತಿ ಕಳೆದುಕೊಂಡಿದೆ. ಹಾಗಾಗಿ ಬರುವ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next