Advertisement

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

01:27 PM Jul 30, 2021 | Team Udayavani |

ಕಲಬುರಗಿ: ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಅವರ ಬೆಂಬಲಿಗರು ಮತ್ತು ಅಭಿಮಾನಿಗಳು ನಗರದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿ, ಶರಣಬಸವೇಶ್ವರರ ದೇವಸ್ಥಾನದಲ್ಲಿ ದೀರ್ಘದಂಡ ನಮಸ್ಕಾರ ಹಾಕಿದರು.

Advertisement

ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಶರಣಬಸವೇಶ್ವರರ ದೇವಸ್ಥಾನದವರೆಗೆ ನೂರಾರು ಜನ ಬೆಂಬಲಿಗರು ಮೆರವಣಿಗೆಯಲ್ಲಿ ತೆರಳಿದರು. ಜಿಲ್ಲಾಧಿಕಾರಿ ಕಚೇರಿ, ಜಗತ್ ವೃತ್ತದ ಮಾರ್ಗವಾಗಿ ಮೆರವಣಿಗೆ ನಡೆಸಿ, ಮಾರ್ಗ ಮಧ್ಯೆ ಮಹಾತ್ಮರಾದ ‌ಬಾಬು ಜಗಜೀವನರಾಂ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಸವೇಶ್ವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.

ಇದನ್ನೂ ಓದಿ:ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಧು ಬಂಗಾರಪ್ಪ: ಬೆಂಗಲಿಗರ ಸಂಭ್ರಮಾಚರಣೆ

ನಂತರ ದೇವಸ್ಥಾನದ ಆವರಣದಲ್ಲಿ ಹತ್ತಕ್ಕೂ ಜನ ಬೆಂಬಲಿಗರು ದೀರ್ಘದಂಡ ನಮಸ್ಕಾರ ಹಾಕಿದರು. ಜತೆಗೆ ಶಾಸಕರ ಭಾವಚಿತ್ರ ಹಿಡಿದು ಜೈಕಾರ, ಘೋಷಣೆ ಕೂಗಿದರು.

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಮತ್ತಿಮಡು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಮೆರವಣಿಗೆಯುದ್ದಕ್ಕೂ ಮುಖಂಡರಾದ ಪ್ರಶಾಂತ ವಾಗ್ಮೊರೆ, ಸತೀಶ ಲಾಡ್ ಮುಗುಲಿ, ಹರ್ಷಾನಂದ, ರಾಜು ವಾಲಿ, ಸಂಗಮೇಶ ವಾಲಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next