Advertisement

ಸ್ಥಳೀಯರಿಗೆ ಉದ್ಯೋಗದಲ್ಲಿ ಪ್ರಾಶಸ್ತ್ಯ: ಸದನದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಒತ್ತಾಯ

01:01 PM Feb 05, 2021 | Team Udayavani |

ಬೆಂಗಳೂರು: ಸ್ಥಳೀಯವಾಗಿ ಇರುವ ಕೈಗಾರಿಕೆ, ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇಕಡಾವಾರು ಉದ್ಯೋಗ ಕಡ್ಡಾಯವಾಗಿ ನೀಡುವಂತಾಗಲು ಸರೋಜಿನಿ ಮಹಿಷಿ ವರದಿಯನ್ನು ಸಮರ್ಪವಾಗಿ ಅನುಷ್ಠಾನಗೊಳಿಸಲು ಸರಕಾರ ಮುಂದಾಗಬೇಕು ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಸದನದಲ್ಲಿ ಒತ್ತಾಯಿಸಿದರು.

Advertisement

ಇದನ್ನೂ ಓದಿ:ಖಂಡ್ರೆ ರಾಜೀನಾಮೆ ಕೊಡ್ತೇನೆ ಅಂದ್ರೆ, ವಿ. ಸೋಮಣ್ಣ ನೇಣು ಹಾಕಿಕೊಳ್ತೇನೆ ಅಂದ್ರು

50ಕ್ಕಿಂತ ಅಧಿಕ ಉದ್ಯೋಗಿಗಳು ಇದ್ದಲ್ಲಿ ಈ ನಿಯಮ ಜಾರಿಯಾಗಬೇಕಿದೆ. ಸಿ ಮತ್ತು ಡಿ ಗ್ರೂಪ್ ಗಳಲ್ಲಿ ಶೇ 100, ಬಿ ಗ್ರೂಪ್ ಗೆ ಶೇ 85, ಎ ಗ್ರೂಪ್ ಗೆ ಶೇ 65, ಉದ್ಯೋಗವನ್ನು ನೀಡಬೇಕೆಂಬ ನಿಯಮವಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ಸಭೆ ನಡೆದು ವರದಿ ಅನುಷ್ಟಾನ ಮಾಡಲು ಅವಕಾಶ ನೀಡಲಾಗಿದೆ. ಕೈಗಾರಿಕಾ ಉದ್ಯೋಗ ನೀತಿಯಲ್ಲಿ ಇದರ ಬಗ್ಗೆ 2019ರಲ್ಲಿ ತಿದ್ದುಪಡಿ ಮಾಡಲಾಗಿದೆ. ಆದರೆ ಇದನ್ನು ಕಟ್ಟುನಿಟ್ಟಾಗಿ ಜಾರಿ ಮಾಡಿ ಸ್ಥಳೀಯರಿಗೆ ಉದ್ಯೋಗ ಸಿಗುವಂತೆ ಸರಕಾರ ಮಾಡಬೇಕಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿ:ವಿಧಾನ ಪರಿಷತ್ ಕಲಾಪ ಮೂರು ದಿನ ವಿಸ್ತರಣೆ: ಫೆ.10 ರವರೆಗೆ ನಡೆಯಲಿದೆ ಕಲಾಪ

ಇದಕ್ಕೆ ಸದನದಲ್ಲಿ ಉತ್ತರಿಸಿದ ಕಾರ್ಮಿಕ ಸಚಿವ ಹೆಬ್ಬಾರ್ ಈ ಬಗ್ಗೆ ಗಮನಹರಿಸಲಾಗುವುದು ಎಂದು ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next