Advertisement

ಸೋಂಕಿತರ ಸೇವೆಗೆ ಮಾದರಿ ಗಣೇಶ

05:25 PM May 29, 2021 | Team Udayavani |

ವರದಿ : ಮಹಾದೇವ ಪೂಜೇರಿ

Advertisement

ಚಿಕ್ಕೋಡಿ: ಕೋವಿಡ್‌ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೊಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ತಮ್ಮ ಕ್ಷೇತ್ರದ ಜನರನ್ನು ಕೊರೊನಾ ಸಂಕಟದಿಂದ ಪಾರು ಮಾಡಲು ನಿರಂತರ ಪ್ರಯತ್ನದ ಜೊತೆಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ.

ಕ್ಷೇತ್ರದ ಜನರಿಗೆ ಯಾವುದೇ ತೊಂದರೆಯಾಗದಂತೆ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಎರಡು ಕೋವಿಡ್‌ ಆಸ್ಪತ್ರೆ, ಯಕ್ಸಂಬಾ ಮತ್ತು ಸದಲಗಾ ಪಟ್ಟಣದಲ್ಲಿ ಕೋವಿಡ್‌ ಆಸ್ಪತ್ರೆ ಆರಂಭ ಮಾಡಿ ಸೋಂಕಿತರ ಆರೈಕೆಗೆ ಅನುಕೂಲ ಕಲ್ಪಿಸಿದ್ದಾರೆ.

ಸ್ವಂತ ಖರ್ಚಿನಲ್ಲಿ ವೈದ್ಯರ ನೇಮಕ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದನ್ನು ಮನಗಂಡು ಶಾಸಕ ಹುಕ್ಕೇರಿ ಅವರು ತಮ್ಮ ಅನ್ನಪೂರ್ಣೇಶ್ವರಿ ಫೌಂಡೇಶನ್‌ ಮೂಲಕ ವೈದ್ಯರು ಸೇರಿದಂತೆ 22 ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಂಡು ಅವರನ್ನು ಚಿಕ್ಕೋಡಿ ತಾಲೂಕಿನ ಅಂಕಲಿ, ಯಕ್ಸಂಬಾ ಮತ್ತು ಸದಲಗಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸುವ ಮೂಲಕ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. 8 ಜನ ಎಂಬಿಬಿಎಸ್‌ ವೈದ್ಯರು, ಇಬ್ಬರು ಎಂಡಿ, ಇಬ್ಬರು ಬಿಎಎಂಎಸ್‌ ವೈದ್ಯರು ಹಾಗೂ ಸ್ಟಾಫ್‌ ನರ್ಸ ಮತ್ತು ಡಿ ಗ್ರೂಪ್‌ನ 10 ಜನ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಎಂ.ಡಿ ವೈದ್ಯರಿಗೆ 4 ಲಕ್ಷ ರೂ, ಎಂಬಿಬಿಎಸ್‌ ವೈದ್ಯರಿಗೆ 3 ಲಕ್ಷ ರೂ, ಬಿಎಎಂಎಸ್‌ ವೈದ್ಯರಿಗೆ 60 ಸಾವಿರ ರೂ, ಸ್ಟಾಫ್‌ ನರ್ಸ್‌ಗೆ 30 ಸಾವಿರ ರೂ. ಹಾಗೂ ಡಿ ಗ್ರೂಪ್‌ ಸಿಬ್ಬಂದಿಗಳಿಗೆ 20 ಸಾವಿರ ರೂ. ವೇತನ ನಿಗದಿ ಮಾಡಿದ್ದಾರೆ. ಬರುವ ದಿನಗಳಲ್ಲಿ ಖಡಕಲಾಟ ಹಾಗೂ ಪಟ್ಟಣಕುಡಿ ಪ್ರಾಥಮಿಕ ಆಸ್ಪತ್ರೆಗಳಲ್ಲಿಯೂ ಸಹ ವೈದ್ಯರನ್ನು ನೇಮಕ ಮಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ಮುಂದಾಗಲಿದ್ದಾರೆ.

ಕ್ಷೇತ್ರದ ಜನರಿಗೆ ವ್ಯಾಕ್ಸಿನ್‌ ಕೊಡಿಸಲು ವಾಹನದ ವ್ಯವಸ್ಥೆ, ಕೋವಿಡ್‌ ಆಸ್ಪತ್ರೆಯಲ್ಲಿ ಉಚಿತ ಊಟದ ವ್ಯವಸ್ಥೆ, ಆಕ್ಸಿಜನ್‌ ಕೊರತೆ ನೀಗಿಸುವಲ್ಲಿ ನಿರಂತರವಾಗಿ ಅಧಿ ಕಾರಿಗಳ ಸಭೆ ನಡೆಸುತ್ತಿರುವ ಶಾಸಕ ಗಣೇಶ ಹುಕ್ಕೇರಿ ಅವರು ಹಗಲು ರಾತ್ರಿ ಎನ್ನದೇ ಕೊರೊನಾ ನಿಯಂತ್ರಣ ದಲ್ಲಿ ಸಮರೋಪಾದಿಯಲ್ಲಿ ತೊಡಗಿಕೊಂಡಿದ್ದಾರೆ.

Advertisement

ಪುತ್ರನಿಗೆ ತಂದೆ ಸಾಥ್‌: ಕೊರೊನಾ ವಿರುದ್ಧ ಹೋರಾಟದಲ್ಲಿ ಶಾಸಕ ಗಣೇಶ ಹುಕ್ಕೇರಿಗೆ ತಂದೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸಂಪೂರ್ಣ ಸಾಥ್‌ ನೀಡಿದ್ದಾರೆ. 75ರ ಇಳಿವಯಸ್ಸಿನಲ್ಲಿಯೂ ಕೂಡ ಚಿಕ್ಕೋಡಿ-ಸದಲಗಾ ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸುತ್ತಿದ್ದಾರೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ವಿವಿಧ ಪ್ರಾಥಮಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿಯ ಸಮಸ್ಯೆ ನಿವಾರಿಸಿ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಜನರೇಟರ್‌ ಸೌಲಭ್ಯ: ಮಳೆ-ಗಾಳಿಗೆ ವಿದ್ಯುತ್‌ ಸಮಸ್ಯೆ ಆಗಬಾರೆಂದು ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ನಾಲ್ಕು ಆಸ್ಪತ್ರೆಗಳಿಗೆ ಹುಕ್ಕೇರಿ ಕುಟುಂಬ ಅನ್ನಪೂರ್ಣೇಶ್ವರಿ ಫೌಂಡೇಶನ್‌ ಮೂಲಕ ಹೊಸ ಜನರೇಟರ್‌ ಒದಗಿಸಿ ವಿದ್ಯುತ್‌ ಸಮಸ್ಯೆ ನೀಗಿಸಿದ್ದಾರೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ, ಸದಲಗಾ, ಯಕ್ಸಂಬಾ ಮತ್ತು ಖಡಕಲಾಟ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 16 ಲಕ್ಷ ರೂ. ವೆಚ್ಚದಲ್ಲಿ ಜನರೇಟರ್‌ ಸೌಲಭ್ಯ ಕಲ್ಪಿಸಿದ್ದಾರೆ.

ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೈಪಲೈನ್‌ ಅಳವಡಿಕೆ: ಹೆಚ್ಚಿನ ಸೋಂಕಿತರು ಆಕ್ಸಿಜನ್‌ ಕೊರತೆಯಿಂದ ಬಳಲುತ್ತಿರುವ ಪರಿಣಾಮ ಕೊರೊನಾ ಪೀಡಿತರಿಗೆ ಅನುಕೂಲವಾಗಲು ತಾಲೂಕಿನ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೈಪ್‌ಲೈನ್‌ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಚಿತ ಊಟ-ಔಷಧ: ಶಾಸಕ ಗಣೇಶ ಹುಕ್ಕೇರಿ ಮತ್ತು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಕೊರೊನಾ ಸೋಂಕು ತಗುಲಿರುವ ಗ್ರಾಮೀಣ ಪ್ರದೇಶದ ಬಡ ಜನರಿಗೆ ಉಚಿತ ಊಟ, ಔಷಧ ನೀಡಿ, ಬಡ ಜನರ ಕಷ್ಟಕ್ಕೆ ಹೆಗಲು ಕೊಟ್ಟು ನಾವು ನಿಮ್ಮೊಂದಿಗೆ ಇದ್ದೇವೆ ಎಂದು ತಾಲೂಕಿನ ಜನರಿಗೆ ಧೆ„ರ್ಯ ತುಂಬುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next