Advertisement

ಶಾಸಕ ಗಣೇಶ್‌ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್‌

01:28 AM Feb 20, 2019 | Team Udayavani |

ಬೆಂಗಳೂರು: ವಿಜಯನಗರ (ಹೊಸಪೇಟೆ) ಶಾಸಕ ಆನಂದ್‌ ಸಿಂಗ್‌ ಮೇಲಿನ ಹಲ್ಲೆ ಪ್ರಕರಣದ
ಆರೋಪದಲ್ಲಿ ಬಂಧನ ಭೀತಿ ಎದುರಿಸಿ ಸದ್ಯ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌
ತಾವು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆದುಕೊಂಡಿದ್ದಾರೆ.

Advertisement

ನಿರೀಕ್ಷಣಾ ಜಾಮೀನು ಕೋರಿ ಶಾಸಕ ಗಣೇಶ್‌ ಸೋಮವಾರಷ್ಟೇ (ಫೆ.18) ಬೆಂಗಳೂರಿನಲ್ಲಿರುವ
“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ’ಕ್ಕೆ (82ನೇ ಹೆಚ್ಚುವರಿ ಸಿಟಿ ಸಿವಿಲ್‌ ಹಾಗೂ ಸೆಷನ್ಸ್‌ ಕೋರ್ಟ್‌) ಅರ್ಜಿ ಸಲ್ಲಿಸಿದ್ದರು.

ಆದರೆ, ಅದರ ಮರು ದಿನವೇ ಮಂಗಳವಾರ ಅರ್ಜಿಯನ್ನು ವಾಪಸ್‌ ಪಡೆದುಕೊಂಡಿದ್ದಾರೆ. ಅರ್ಜಿಯ
ವಿಚಾರಣೆ ಫೆ.25ಕ್ಕೆ ನಿಗದಿಯಾಗಿತ್ತು. ಈ ಮಧ್ಯೆ, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾದ ಗಣೇಶ್‌
ಪರ ವಕೀಲರು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್‌ ಪಡೆಯುತ್ತಿರುವುದಾಗಿ ನ್ಯಾಯಾಧೀಶರಿಗೆ ಹೇಳಿ, ಅರ್ಜಿಯನ್ನು ಹಿಂದಕ್ಕೆ ಪಡೆದುಕೊಂಡರು.

ಹಲ್ಲೆಗೊಳಗಾದ ಶಾಸಕ ಆನಂದ್‌ ಸಿಂಗ್‌ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ ಎಂಬ ಕಾರಣಕ್ಕೆ ಅರ್ಜಿಯನ್ನು ವಾಪಸ್‌ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next