Advertisement

ಶಾಸಕ ಗುಬ್ಬಿ ಶ್ರೀನಿವಾಸ್‌ ಹೇಳಿಕೆ: ಮಾಧ್ಯಮಗಳ ವಿರುದ್ಧ ಸಿದ್ದು ಕಿಡಿ

10:02 PM Mar 24, 2024 | Team Udayavani |

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಕ್ಷೇತ್ರ ಗೆಲ್ಲದಿದ್ದರೆ, ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಾಗಬಹುದು ಎಂಬ ಶಾಸಕ ಗುಬ್ಬಿ ಶ್ರೀನಿವಾಸ್‌ ಹೇಳಿಕೆ ವಿಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಪ್ರಸಂಗ ನಡೆಯಿತು.

Advertisement

ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರವಿವಾರ ಮಾಧ್ಯಮಗಳೊಂದಿಗೆ ಮಾತನಾಡಿವ ವೇಳೆ, ಗುಬ್ಬಿ ಶ್ರೀನಿವಾಸ್‌ ಹೇಳಿಕೆಯಲ್ಲಿ ಹಿಂದೆ, ಮುಂದೆ ಬಿಟ್ಟುಬಿಡ್ತೀರಾ? ಅವರ ಪೂರ್ಣ ಅರ್ಥದ ಮಾತುಗಳನ್ನು ತೋರಿಸಲ್ಲ. ಅವರು ಹೇಳಿರೋದು ಸಿದ್ದರಾಮಯ್ಯ ಬಡವರ ಪರ ಕೆಲಸ ಮಾಡಿದ್ದಾರೆ. ಜನರು ಅವರನ್ನು ಬೆಂಬಲಿಸಬೇಕು. ಇದನ್ನು ಬಿಟ್ಟು ಗುಬ್ಬಿ ಶ್ರೀನಿವಾಸ್‌ ಬೇರೆ ಏನೂ ಹೇಳಿಲ್ಲ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

ಬೇಗ ಗುಣಮುಖರಾಗಲಿ: ಎಚ್‌.ಡಿ.ಕುಮಾರಸ್ವಾಮಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಅವರು ಬೇಗ ಗುಣಮುಖರಾಗಲಿ, ಅವರಿಗೆ ಒಳ್ಳೆಯದಾಗಲಿ ಎಂದು ಇದೇ ವೇಳೆ ಸಿದ್ದರಾಮಯ್ಯ ಹಾರೈಸಿದರು.

ನಮ್ಮ ತಾಯಾಣೆಗೂ ನಾನು ಕಾಂಗ್ರೆಸ್‌ ಗುಂಪು: ಗುಬ್ಬಿ
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ, ಹಿಂದುಳಿದ ವರ್ಗಗಳ ಪರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸದಿದ್ದರೆ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಬಿಜೆಪಿಯವರು ಕೇಳುತ್ತಾರೆ ಅಂತ ನಾನು ಹೇಳಿದ್ದು ಎಂದು ಗುಬ್ಬಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಹೇಳಿದರು.

ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಆದರೆ ವಾಸಣ್ಣ ಆ ಗುಂಪು, ಈ ಗುಂಪು ಅಂತ ಹೇಳುತ್ತಾರೆ. ನಮ್ಮ ತಾಯಾಣೆಗೂ ನಾನು ಕಾಂಗ್ರೆಸ್‌ ಗುಂಪು ಎಂದು ಸಿದ್ದರಾಮಯ್ಯ ಕುರಿತ ಹೇಳಿಕೆಗೆ ಸ್ಪಷ್ಟನೆ ನೀಡಿದರು.

Advertisement

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ನಾನು ಹರಿಯೋ ನೀರಿದ್ದಂತೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ವಿ. ಸೋಮಣ್ಣ ಕೊಡುಗೆ ಏನು? ಸ್ವಾಮೀಜಿ ಕಾಲಿಗೆ ಬಿದ್ದಿದ್ದು ಬಿಟ್ರೆ ಬೇರೇನೂ ಇಲ್ಲ. ಸೋಮಣ್ಣ ನಾನು ನಿಂತ ನೀರಲ್ಲ ಹರಿಯೋ ನೀರು ಅಂದಿದ್ದಾರೆ. ನೀವು ಎಲ್ಲಿಗೆ ಹರಿಯುತ್ತಿರಾ? ನೀವು ಚಾಮರಾಜಪೇಟೆಲಿ ಹುಟ್ಟಿ ಚಾಮರಾಜನಗರಕ್ಕೆ ಹರಿದೆ. ಅಲ್ಲಿಂದ ಸಿದ್ದರಾಮಣ್ಣನ ಕ್ಷೇತ್ರ ವರುಣಗೆ ಹೋದೆ. ಈಗ ತುಮಕೂರಿಗೆ ಹರಿದುಕೊಂಡು ಬಂದು ಬಿಟ್ಟಿದ್ಯಾ. ಹರಿಯೋ ನೀರು ಯಾರಿಗೂ ಉಪಯೋಗ ಆಗೋಲ್ಲ ಎಂದು ಸೋಮಣ್ಣ ಹೇಳಿಕೆಗೆ ಟಾಂಗ್‌ ಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next