ಚಿಕ್ಕಮಗಳೂರು: ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಎಚ್ ಡಿ ತಮ್ಮಯ್ಯ ಅವರು ಸದ್ಯ ಬೈಕಿನಲ್ಲಿ ಹಳ್ಳಿ-ಹಳ್ಳಿ ಸುತ್ತುತ್ತಿದ್ದಾರೆ. ಯುವಕರ ಜೊತೆಗೆ ಹಳ್ಳಿ ರೌಂಡ್ಸ್ ಹಾಕುತ್ತಿರುವ ಶಾಸಕ ತಮ್ಮಯ್ಯ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಹಳ್ಳಿಗಳನ್ನ ಸುತ್ತುತ್ತಿರುವ ಶಾಸಕ ತಮ್ಮಯ್ಯ ಅವರಿಗೆ ಯುವಕರು ಸಾಥ್ ನೀಡುತ್ತಿದ್ದಾರೆ.
ಇದನ್ನೂ ಓದಿ:ಪಠ್ಯಪುಸ್ತಕ ವಿಚಾರದಲ್ಲಿ ಬಿಜೆಪಿ ಮಾಡಿದ ಎಡವಟ್ಟು ಸರಿ ಮಾಡುತ್ತೇವೆ: ಸಚಿವ ಮಹದೇವಪ್ಪ
ಚುನಾವಣೆಗೆ ಎರಡು ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದ ತಮ್ಮಯ್ಯ ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ. ಶಾಸಕರಾಗಿದ್ದ ಸಿ.ಟಿ ರವಿ ಅವರನ್ನು ತಮ್ಮಯ್ಯ ಐದು ಸಾವಿರ ಮತಗಳ ಅಂತರದಿಂದ ಸೋಲಿಸಿದ್ದಾರೆ.